Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...