Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...