Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...