Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...