Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...