Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...