Homeಮುಖಪುಟಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

ಮಿಡತೆ ದಾಳಿ ಜುಲೈ ತಿಂಗಳಿನವರೆಗೂ ಮುಂದುವರೆಯಲಿದೆ: ಆಹಾರ ಮತ್ತು ಕೃಷಿ ಸಂಸ್ಥೆ

- Advertisement -
- Advertisement -

ಭಾರತದಲ್ಲಿ ಮಿಡತೆಗಳ ದಾಳಿ ಜುಲೈ ತಿಂಗಳವರೆಗೂ ಮುಂದುವರೆಯಲಿದ್ದು, ಇದಕ್ಕೆ ಕನಿಷ್ಠ ಏಳು ರಾಜ್ಯಗಳು ಗುರಿಯಾಗುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಓ)’ ಹೇಳಿದೆ.

ಜೂನ್ ತಿಂಗಳಿನ ಅಂತ್ಯದೊಳಗೆ ಮಿಡತೆಗಳ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳ ವಿಫಲವಾದರೆ, ದೊಡ್ಡ ಪ್ರಮಾಣದಲ್ಲಿ ಬೆಳೆ ನಷ್ಟವವನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೂನ್ ಅಂತ್ಯದಲ್ಲಿ ಮಿಡತೆಗಳು ರಾಜಸ್ಥಾನಕ್ಕೆ ಮರಳುವ ಮೊದಲು ಉತ್ತರ ಭಾರತದಲ್ಲಿ ವ್ಯಾಪಕವಾಗು ಹರಡಲಿರುವ ಬಗ್ಗೆ ಮರುಭೂಮಿ ಮಿಡತೆ ಬುಲೆಟಿನ್‌ನಲ್ಲಿ ಎಫ್‌ಎಓ ತಿಳಿಸಿದೆ.

ಭಾರತವು ಕಳೆದ ದಶಕಗಳಲ್ಲಿ ಇಂದೆದೂ ಎದುರಿಸಂದತಹ ಮಿಡತೆ ದಾಳಿಯನ್ನು ಕಳೆದ ತಿಂಗಳು ಎದುರಿಸಿದೆ. ಮಿಡತೆಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬೆಳೆಗಳನ್ನು ನಾಶಪಡಿಸಿದ್ದು, ನಂತರ ಮಿಡತಗಳು ಹಿಂಡು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ನುಗ್ಗಿವೆ.

“ಇರಾನ್ ಮತ್ತು ಪಾಕಿಸ್ತಾನದಿಂದ ಬಂದಿರುವ ಮಿಡತೆಗಳ ಹಿಂಡುಗಳು ಜೂನ್‌ ಅಂತ್ಯದಲ್ಲಿ ರಾಜಸ್ಥಾನಕ್ಕೆ ಬರಲಿದ್ದು, ಅದರ ಜೊತೆಗೆ ಜುಲೈ ಆರಂಭದಲ್ಲಿ ಪೂರ್ವ ಆಫ್ರಿಕಾದಿಂದ   ಹೆಚ್ಚುವರಿ ಹಿಂಡುಗಳು ಗುಜರಾತ್ ಮತ್ತು ರಾಜಸ್ಥಾನಕ್ಕೆ ಬರುತ್ತವೆ” ಎಂದು ಬುಲೆಟಿನ್ ಹೇಳಿದೆ.

ಮಿಡತೆಗಳು ಬೆಳೆ ಪ್ರದೇಶಗಳಲ್ಲಿ ನೆಲೆಸುತ್ತಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಛತ್ತಿಸ್‌ಘಡ ಮತ್ತು ಪೂರ್ವಕ್ಕೆ ಬಿಹಾರ ಮತ್ತು ಒಡಿಶಾದವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಈ ವೇಳೆಗೆ ವ್ಯಾಪಕಗೊಳ್ಳುವ ಹಿಂಡುಗಳು ಜುಲೈ ಆರಂಭದಲ್ಲಿ ಮಾನ್ಸೂನ್ ಆರಂಭದೊಂದಿಗೆ ರಾಜಸ್ಥಾನಕ್ಕೆ ಬರುತ್ತವೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾನ್ಸೂನ್‌ಗೆ ಮುಂಚಿತವಾಗಿ ಮೇ ತಿಂಗಳಲ್ಲಿ ನೈರುತ್ಯ ಪಾಕಿಸ್ತಾನದಿಂದ ರಾಜಸ್ಥಾನಕ್ಕೆ ಮಿಡತೆ ಹಿಂಡುಗಳ ವಲಸೆ ಆರಂಭವಾಗಿದ್ದು, 1962ರ ನಂತರ ಮೊದಲ ಬಾರಿಗೆ ಉತ್ತರ ರಾಜ್ಯಗಳಿಗೆ ಪ್ರಯಾಣ ಬೆಳೆಸಿವೆ ಎಂದು ಎಂದು ಎಫ್‌ಎಒ ಹೇಳಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ರಾಜಸ್ಥಾನದ ಬಾರ್ಮರ್ ಮತ್ತು ಜೋಧ್ಪುರ್ ಜಿಲ್ಲೆಗಳ ಅನೇಕ ಗ್ರಾಮಗಳು ಮಿಡತೆ ದಾಳಿಗೆ ಒಳಗಾಗುತ್ತವೆ ಎಂದು ಕೇಂದ್ರ ಕೃಷಿ ಸಚಿವಾಲಯದ ಲೋಕಸ್ಟ್ ಎಚ್ಚರಿಕೆ ಸಂಸ್ಥೆ ತಿಳಿಸಿದೆ.

“ಇದುವರೆಗೆ 65,000 ಹೆಕ್ಟೇರ್ ಪ್ರದೇಶದಲ್ಲಿ ಮಿಡತೆಗಳನ್ನು ನಿಯಂತ್ರಿಸಲಾಗಿದೆ. ಮುಂಬ

ರುವ ದಿನಗಳಲ್ಲಿ ಮಿಡತೆಯ ಮೇಲೆ ಆಕ್ರಮಣಕ್ಕಾಗಿ ಜಾಗರೂಕತೆ ಮುಂದುವರಿಯುತ್ತದೆ” ಎಲ್‌ಡಬ್ಲ್ಯುಒ ಉಪನಿರ್ದೇಶಕ ಕೆ.ಎಲ್.ಗುರ್ಜರ್ ತಿಳಿಸಿದ್ದಾರೆ.

“ಮಿಡತೆಗಳ ನಿಯಂತ್ರಣ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಮತ್ತು ಪೀಡಿತ ರಾಜ್ಯಗಳಲ್ಲಿ ಕೀಟನಾಶಕಗಳನ್ನು ವೈಮಾನಿಕವಾಗಿ ಸಿಂಪಡಿಸಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಕೃಷಿ ಸಚಿವಾಲಯವು ಮೇ 27 ರಂದು ತಿಳಿಸಿತ್ತು.

ರಾಜಸ್ಥಾನದ 21, ಮಧ್ಯಪ್ರದೇಶದಲ್ಲಿ 18, ಗುಜರಾತ್‌ನಲ್ಲಿ ಎರಡು ಮತ್ತು ಪಂಜಾಬ್‌ನಲ್ಲಿ ಒಂದು ಜಿಲ್ಲೆಗಳಲ್ಲಿ ಬುಧವಾರದವರೆಗೆ 47,000 ಹೆಕ್ಟೇರ್‌ಗಿಂತಲೂ ಹೆಚ್ಚು ವಿಸ್ತಾರವಾದ 303 ಸ್ಥಳಗಳಲ್ಲಿ ಮಿಡತೆ ನಾಶಕ್ಕೆ ಔಷಧಿ ಸಿಂಪಡಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಸಾಮಾನ್ಯವಾಗಿ, ಮಾನ್ಸೂನ್ ಆಗಮನದ ಸಂದರ್ಭದಲ್ಲಿ, ಮಿಡತೆ ಹಿಂಡುಗಳು ಜೂನ್-ಜುಲೈನಲ್ಲಿ ಸಂತಾನೋತ್ಪತ್ತಿಗಾಗಿ ಪಾಕಿಸ್ತಾನದ ಮೂಲಕ ಭಾರತದ ಮರುಭೂಮಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ. ಆದರೆ ಈ ವರ್ಷ ಏಪ್ರಿಲ್ 30ಕ್ಕೂ ಹಿಂದೆಯೇ ರಾಜಸ್ಥಾನ ಮತ್ತು ಪಂಜಾಬ್‌ನಲ್ಲಿ ಮಿಡತೆಗಳು ಧಾವಿಸಿರುವುದು ವರದಿಯಾಗಿವೆ.

ಮಿಡತೆಗಳ ಸೈನ್ಯವು ಈ ವರ್ಷ ಭಾರತದ ಕೃಷಿಗೆ “ತೀವ್ರ ಅಪಾಯ” ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆಯು ಈ ತಿಂಗಳ ಆರಂಭದಲ್ಲಿ ಎಚ್ಚರಿಸಿತ್ತು.


ಓದಿ: ಭಾರತಕ್ಕೆ ದಾಳಿ ಇಟ್ಟ ಮಿಡತೆಗಳು, ಕರ್ನಾಟಕಕ್ಕಿಲ್ಲ ಭಯ; ಏಕೆ ಗೊತ್ತಾ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...