Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು : ಬಹುಮತ ಸಾಬೀತಿಗೆ ಎರಡು ವಾರ ಸಮಯ ಕೇಳಿದ ಕಾಂಗ್ರೆಸ್‌-ಕಷ್ಟ ಎಂದ ಸುಪ್ರೀಂ

ಮಧ್ಯಪ್ರದೇಶ ಬಿಕ್ಕಟ್ಟು : ಬಹುಮತ ಸಾಬೀತಿಗೆ ಎರಡು ವಾರ ಸಮಯ ಕೇಳಿದ ಕಾಂಗ್ರೆಸ್‌-ಕಷ್ಟ ಎಂದ ಸುಪ್ರೀಂ

- Advertisement -
- Advertisement -

ನಮ್ಮ ಶಾಸಕರು ಒತ್ತಡದಲ್ಲಿದ್ದಾರೆ. ಹಾಗಾಗಿ ಅವರು ತಮ್ಮ ಮನಗಳಿಗೆ ಹಿಂದಿರುಗಿ ವಿಶ್ರಾಂತಿ ಪಡೆಯಲಿ. ನಂತರ ಎರಡು ವಾರಗಳಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಸುಪ್ರೀಂ ಕೋರ್ಟ್‌‌ಗೆ ಕಾಂಗ್ರೆಸ್‌ ತಿಳಿಸಿದೆ.

ಬೆಂಗಳೂರಿನಲ್ಲಿರುವ ಅತೃಪ್ತ ಕಾಂಗ್ರೆಸ್ ಶಾಸಕರೊಂದಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡಬಹುದೇ ಎಂದು ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸ್ಪೀಕರ್ ಪ್ರಜಾಪತಿಯವರನ್ನು ಕೇಳಿದೆ.

ಪ್ರತಿಯಾಗಿ ಸುಪ್ರೀಂ ಕೋರ್ಟ್‌ ನಾನು ಶಾಸಕರಿಗೆ ಖುದ್ದಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಆದರೆ ಕಾಂಗ್ರೆಸ್‌ ಶಾಸಕರು ರಕ್ಷಣೆ ಇಲ್ಲದೆ ಸ್ಪೀಕರ್‌ ಬಳಿಗೆ ಬರಲು ಸಾಧ್ಯವಿಲ್ಲ. ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವಂತೆ ಕಾಂಗ್ರೆಸ್ ಪಕ್ಷವು ಒತ್ತಾಯಿಸಲು ಪ್ರಯತ್ನಿಸುತ್ತಿದೆ ಆದ್ದರಿಂದ ಅವರು ತೀವ್ರ ಒತ್ತಡದಲ್ಲಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ಅವರ ರಾಜೀನಾಮೆಯು ನಿಜವಾಗಿಯೂ ಸ್ವಯಂಪ್ರೇರಿತವಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು. ಹಾಗಾಗಿ ನಾವು ಬೆಂಗಳೂರು ಅಥವಾ ಇನ್ನಿತರ ಸ್ಥಳಗಳಿಗೆ ವೀಕ್ಷಕರನ್ನು ನೇಮಿಸಬಹುದು. ಅವರು ವೀಡಿಯೊ ಕಾನ್ಫರೆನ್ಸಿಂಗ್‌ನಲ್ಲಿ ನಿಮ್ಮೊಂದಿಗೆ ಸಂಪರ್ಕ ಸಾಧಿಸಬಹುದು ಮತ್ತು ನಂತರ ನೀವು ನಿರ್ಧರಿಸಬಹುದು” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸ್ಪೀಕರ್‌ಗೆ ತಿಳಿಸಿದ್ದಾರೆ.

ಇದರ ಕುರಿತು ತೀರ್ಮಾನಿಸಲು ಸ್ಪೀಕರ್ ಎರಡು ವಾರಗಳ ಕಾಲ ಸಮಯ ಬೇಕೆಂದು ಸುಪ್ರೀಂ ಕೋರ್ಟ್‌ಗೆ ಕೇಳಿದರು.

“ನಿರ್ಧರಿಸಲು ನನಗೆ ಎರಡು ವಾರ ಕಾಲಾವಕಾಶ ನೀಡಿ. ಬಂಡಾಯ ಶಾಸಕರು ತಮ್ಮ ಮನೆಗಳಿಗೆ ಮಧ್ಯಪ್ರದೇಶಕ್ಕೆ ಹಿಂತಿರುಗಲಿ. ಅವರು ತಮ್ಮ ಕುಟುಂಬಗಳಿಂದ ದೂರವಿರುವ ಅಸ್ವಾಭಾವಿಕ ಆವಾಸಸ್ಥಾನದಲ್ಲಿ ವಾಸಿಸುತ್ತಿದ್ದಾರೆ. ವಿಡಿಯೋ-ಕಾನ್ಫರೆನ್ಸಿಂಗ್ ಕಲ್ಪನೆಯು ನನ್ನ ಆತಂಕಗಳನ್ನು ಮಾತ್ರ ದೃಢೀಕರಿಸುತ್ತದೆ” ಎಂದು ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

ಅದಕ್ಕೆ ಇದಕ್ಕೆ ಒಪ್ಪದ ನ್ಯಾಯಮೂರ್ತಿ ಚಂದ್ರಚೂಡ್ ಅವರು “ವಾರಗಳು ಕುದುರೆ ವ್ಯಾಪಾರ ನಡೆಸಲು ಬೇಕಾದ ಚಿನ್ನದ ಗಣಿಗಳಾಗಿವೆ. ಅದಕ್ಕಾಗಿಯೇ ನ್ಯಾಯಾಲಯವು ಬಹುಮತ ಸಾಬೀತುಪಡಿಸಲು ಮಾಡಬೇಕಾದ ಕೆಲಸಗಳ ಬಗ್ಗೆ ಯೋಚಿಸುತ್ತಿದೆ. ವಿಶ್ವಾಸಮತ ಯಾಚನೆ ನಡೆಯುವಂತೆ ನೋಡಿಕೊಳ್ಳಿರಿ ಎಂದು ಸೂಚಿಸಿದ್ದಾರೆ.

ಆರು ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ ನಂತರ, ಪಕ್ಷವು ಈಗ 108 ಶಾಸಕರನ್ನು ಹೊಂದಿದೆ. ಇವರಲ್ಲಿ ಬೆಂಗಳೂರಿನಲ್ಲಿರುವ 16 ಅತೃಪ್ತರು ಸಹ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...