Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು : ಬಹುಮತ ಸಾಬೀತಿಗೆ ಎರಡು ವಾರ ಸಮಯ ಕೇಳಿದ ಕಾಂಗ್ರೆಸ್‌-ಕಷ್ಟ ಎಂದ ಸುಪ್ರೀಂ

ಮಧ್ಯಪ್ರದೇಶ ಬಿಕ್ಕಟ್ಟು : ಬಹುಮತ ಸಾಬೀತಿಗೆ ಎರಡು ವಾರ ಸಮಯ ಕೇಳಿದ ಕಾಂಗ್ರೆಸ್‌-ಕಷ್ಟ ಎಂದ ಸುಪ್ರೀಂ

- Advertisement -
- Advertisement -

ನಮ್ಮ ಶಾಸಕರು ಒತ್ತಡದಲ್ಲಿದ್ದಾರೆ. ಹಾಗಾಗಿ ಅವರು ತಮ್ಮ ಮನಗಳಿಗೆ ಹಿಂದಿರುಗಿ ವಿಶ್ರಾಂತಿ ಪಡೆಯಲಿ. ನಂತರ ಎರಡು ವಾರಗಳಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಸುಪ್ರೀಂ ಕೋರ್ಟ್‌‌ಗೆ ಕಾಂಗ್ರೆಸ್‌ ತಿಳಿಸಿದೆ.

ಬೆಂಗಳೂರಿನಲ್ಲಿರುವ ಅತೃಪ್ತ ಕಾಂಗ್ರೆಸ್ ಶಾಸಕರೊಂದಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡಬಹುದೇ ಎಂದು ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸ್ಪೀಕರ್ ಪ್ರಜಾಪತಿಯವರನ್ನು ಕೇಳಿದೆ.

ಪ್ರತಿಯಾಗಿ ಸುಪ್ರೀಂ ಕೋರ್ಟ್‌ ನಾನು ಶಾಸಕರಿಗೆ ಖುದ್ದಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಆದರೆ ಕಾಂಗ್ರೆಸ್‌ ಶಾಸಕರು ರಕ್ಷಣೆ ಇಲ್ಲದೆ ಸ್ಪೀಕರ್‌ ಬಳಿಗೆ ಬರಲು ಸಾಧ್ಯವಿಲ್ಲ. ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವಂತೆ ಕಾಂಗ್ರೆಸ್ ಪಕ್ಷವು ಒತ್ತಾಯಿಸಲು ಪ್ರಯತ್ನಿಸುತ್ತಿದೆ ಆದ್ದರಿಂದ ಅವರು ತೀವ್ರ ಒತ್ತಡದಲ್ಲಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ಅವರ ರಾಜೀನಾಮೆಯು ನಿಜವಾಗಿಯೂ ಸ್ವಯಂಪ್ರೇರಿತವಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು. ಹಾಗಾಗಿ ನಾವು ಬೆಂಗಳೂರು ಅಥವಾ ಇನ್ನಿತರ ಸ್ಥಳಗಳಿಗೆ ವೀಕ್ಷಕರನ್ನು ನೇಮಿಸಬಹುದು. ಅವರು ವೀಡಿಯೊ ಕಾನ್ಫರೆನ್ಸಿಂಗ್‌ನಲ್ಲಿ ನಿಮ್ಮೊಂದಿಗೆ ಸಂಪರ್ಕ ಸಾಧಿಸಬಹುದು ಮತ್ತು ನಂತರ ನೀವು ನಿರ್ಧರಿಸಬಹುದು” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸ್ಪೀಕರ್‌ಗೆ ತಿಳಿಸಿದ್ದಾರೆ.

ಇದರ ಕುರಿತು ತೀರ್ಮಾನಿಸಲು ಸ್ಪೀಕರ್ ಎರಡು ವಾರಗಳ ಕಾಲ ಸಮಯ ಬೇಕೆಂದು ಸುಪ್ರೀಂ ಕೋರ್ಟ್‌ಗೆ ಕೇಳಿದರು.

“ನಿರ್ಧರಿಸಲು ನನಗೆ ಎರಡು ವಾರ ಕಾಲಾವಕಾಶ ನೀಡಿ. ಬಂಡಾಯ ಶಾಸಕರು ತಮ್ಮ ಮನೆಗಳಿಗೆ ಮಧ್ಯಪ್ರದೇಶಕ್ಕೆ ಹಿಂತಿರುಗಲಿ. ಅವರು ತಮ್ಮ ಕುಟುಂಬಗಳಿಂದ ದೂರವಿರುವ ಅಸ್ವಾಭಾವಿಕ ಆವಾಸಸ್ಥಾನದಲ್ಲಿ ವಾಸಿಸುತ್ತಿದ್ದಾರೆ. ವಿಡಿಯೋ-ಕಾನ್ಫರೆನ್ಸಿಂಗ್ ಕಲ್ಪನೆಯು ನನ್ನ ಆತಂಕಗಳನ್ನು ಮಾತ್ರ ದೃಢೀಕರಿಸುತ್ತದೆ” ಎಂದು ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

ಅದಕ್ಕೆ ಇದಕ್ಕೆ ಒಪ್ಪದ ನ್ಯಾಯಮೂರ್ತಿ ಚಂದ್ರಚೂಡ್ ಅವರು “ವಾರಗಳು ಕುದುರೆ ವ್ಯಾಪಾರ ನಡೆಸಲು ಬೇಕಾದ ಚಿನ್ನದ ಗಣಿಗಳಾಗಿವೆ. ಅದಕ್ಕಾಗಿಯೇ ನ್ಯಾಯಾಲಯವು ಬಹುಮತ ಸಾಬೀತುಪಡಿಸಲು ಮಾಡಬೇಕಾದ ಕೆಲಸಗಳ ಬಗ್ಗೆ ಯೋಚಿಸುತ್ತಿದೆ. ವಿಶ್ವಾಸಮತ ಯಾಚನೆ ನಡೆಯುವಂತೆ ನೋಡಿಕೊಳ್ಳಿರಿ ಎಂದು ಸೂಚಿಸಿದ್ದಾರೆ.

ಆರು ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ ನಂತರ, ಪಕ್ಷವು ಈಗ 108 ಶಾಸಕರನ್ನು ಹೊಂದಿದೆ. ಇವರಲ್ಲಿ ಬೆಂಗಳೂರಿನಲ್ಲಿರುವ 16 ಅತೃಪ್ತರು ಸಹ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...