Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು : ಬಹುಮತ ಸಾಬೀತಿಗೆ ಎರಡು ವಾರ ಸಮಯ ಕೇಳಿದ ಕಾಂಗ್ರೆಸ್‌-ಕಷ್ಟ ಎಂದ ಸುಪ್ರೀಂ

ಮಧ್ಯಪ್ರದೇಶ ಬಿಕ್ಕಟ್ಟು : ಬಹುಮತ ಸಾಬೀತಿಗೆ ಎರಡು ವಾರ ಸಮಯ ಕೇಳಿದ ಕಾಂಗ್ರೆಸ್‌-ಕಷ್ಟ ಎಂದ ಸುಪ್ರೀಂ

- Advertisement -
- Advertisement -

ನಮ್ಮ ಶಾಸಕರು ಒತ್ತಡದಲ್ಲಿದ್ದಾರೆ. ಹಾಗಾಗಿ ಅವರು ತಮ್ಮ ಮನಗಳಿಗೆ ಹಿಂದಿರುಗಿ ವಿಶ್ರಾಂತಿ ಪಡೆಯಲಿ. ನಂತರ ಎರಡು ವಾರಗಳಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಸುಪ್ರೀಂ ಕೋರ್ಟ್‌‌ಗೆ ಕಾಂಗ್ರೆಸ್‌ ತಿಳಿಸಿದೆ.

ಬೆಂಗಳೂರಿನಲ್ಲಿರುವ ಅತೃಪ್ತ ಕಾಂಗ್ರೆಸ್ ಶಾಸಕರೊಂದಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡಬಹುದೇ ಎಂದು ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸ್ಪೀಕರ್ ಪ್ರಜಾಪತಿಯವರನ್ನು ಕೇಳಿದೆ.

ಪ್ರತಿಯಾಗಿ ಸುಪ್ರೀಂ ಕೋರ್ಟ್‌ ನಾನು ಶಾಸಕರಿಗೆ ಖುದ್ದಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಆದರೆ ಕಾಂಗ್ರೆಸ್‌ ಶಾಸಕರು ರಕ್ಷಣೆ ಇಲ್ಲದೆ ಸ್ಪೀಕರ್‌ ಬಳಿಗೆ ಬರಲು ಸಾಧ್ಯವಿಲ್ಲ. ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವಂತೆ ಕಾಂಗ್ರೆಸ್ ಪಕ್ಷವು ಒತ್ತಾಯಿಸಲು ಪ್ರಯತ್ನಿಸುತ್ತಿದೆ ಆದ್ದರಿಂದ ಅವರು ತೀವ್ರ ಒತ್ತಡದಲ್ಲಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ಅವರ ರಾಜೀನಾಮೆಯು ನಿಜವಾಗಿಯೂ ಸ್ವಯಂಪ್ರೇರಿತವಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು. ಹಾಗಾಗಿ ನಾವು ಬೆಂಗಳೂರು ಅಥವಾ ಇನ್ನಿತರ ಸ್ಥಳಗಳಿಗೆ ವೀಕ್ಷಕರನ್ನು ನೇಮಿಸಬಹುದು. ಅವರು ವೀಡಿಯೊ ಕಾನ್ಫರೆನ್ಸಿಂಗ್‌ನಲ್ಲಿ ನಿಮ್ಮೊಂದಿಗೆ ಸಂಪರ್ಕ ಸಾಧಿಸಬಹುದು ಮತ್ತು ನಂತರ ನೀವು ನಿರ್ಧರಿಸಬಹುದು” ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸ್ಪೀಕರ್‌ಗೆ ತಿಳಿಸಿದ್ದಾರೆ.

ಇದರ ಕುರಿತು ತೀರ್ಮಾನಿಸಲು ಸ್ಪೀಕರ್ ಎರಡು ವಾರಗಳ ಕಾಲ ಸಮಯ ಬೇಕೆಂದು ಸುಪ್ರೀಂ ಕೋರ್ಟ್‌ಗೆ ಕೇಳಿದರು.

“ನಿರ್ಧರಿಸಲು ನನಗೆ ಎರಡು ವಾರ ಕಾಲಾವಕಾಶ ನೀಡಿ. ಬಂಡಾಯ ಶಾಸಕರು ತಮ್ಮ ಮನೆಗಳಿಗೆ ಮಧ್ಯಪ್ರದೇಶಕ್ಕೆ ಹಿಂತಿರುಗಲಿ. ಅವರು ತಮ್ಮ ಕುಟುಂಬಗಳಿಂದ ದೂರವಿರುವ ಅಸ್ವಾಭಾವಿಕ ಆವಾಸಸ್ಥಾನದಲ್ಲಿ ವಾಸಿಸುತ್ತಿದ್ದಾರೆ. ವಿಡಿಯೋ-ಕಾನ್ಫರೆನ್ಸಿಂಗ್ ಕಲ್ಪನೆಯು ನನ್ನ ಆತಂಕಗಳನ್ನು ಮಾತ್ರ ದೃಢೀಕರಿಸುತ್ತದೆ” ಎಂದು ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

ಅದಕ್ಕೆ ಇದಕ್ಕೆ ಒಪ್ಪದ ನ್ಯಾಯಮೂರ್ತಿ ಚಂದ್ರಚೂಡ್ ಅವರು “ವಾರಗಳು ಕುದುರೆ ವ್ಯಾಪಾರ ನಡೆಸಲು ಬೇಕಾದ ಚಿನ್ನದ ಗಣಿಗಳಾಗಿವೆ. ಅದಕ್ಕಾಗಿಯೇ ನ್ಯಾಯಾಲಯವು ಬಹುಮತ ಸಾಬೀತುಪಡಿಸಲು ಮಾಡಬೇಕಾದ ಕೆಲಸಗಳ ಬಗ್ಗೆ ಯೋಚಿಸುತ್ತಿದೆ. ವಿಶ್ವಾಸಮತ ಯಾಚನೆ ನಡೆಯುವಂತೆ ನೋಡಿಕೊಳ್ಳಿರಿ ಎಂದು ಸೂಚಿಸಿದ್ದಾರೆ.

ಆರು ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ ನಂತರ, ಪಕ್ಷವು ಈಗ 108 ಶಾಸಕರನ್ನು ಹೊಂದಿದೆ. ಇವರಲ್ಲಿ ಬೆಂಗಳೂರಿನಲ್ಲಿರುವ 16 ಅತೃಪ್ತರು ಸಹ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...