Homeಕರ್ನಾಟಕಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

“ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು” ಎಂದು ಅವರು ಕಿಡಿಕಾರಿದ್ದಾರೆ.

“ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು” ಎಂದು ಅವರು ಹೇಳಿದ್ದಾರೆ.

“ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ವಿಡಿಯೊ ನೋಡಿ: ದುಡಿವಾಗ ಬೇಕು…. ನಡೆವಾಗ ಬೇಡ…… ಭಾರತೀಯರು ಮರೆಯಬಾರದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...