Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...