Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...