Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...