Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...