HomeUncategorizedಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ರಿಪಬ್ಲಿಕ್ ಭಾರತ್ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ‘ಕೋಮು ದ್ವೇಷವನ್ನು ಪ್ರಚೋದಿಸಿದ್ದಾರೆ’ ಎಂಬ ದೂರುಗಳ ಆಧಾರದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕರ ವಿರುದ್ಧ ನೋಂದಾಯಿಸಲಾದ ಎಫ್ಆರ್‌ಐಗಳನ್ನು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರ್ನಾಬ್‌ ವಿರುದ್ಧ ಪಾಲ್ಘರ್ ಲಿಂಚಿಂಗ್ ಘಟನೆಯನ್ನು ಕೋಮುವಾದೀಕರಿಸಿದ್ದರು ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ವಯಕ್ತಿಕ ತೇಜೋವಧೆ ನಡೆಸಿದ್ದರು ಎಂಬ ಆರೋಪಗಳಿವೆ.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...