HomeUncategorizedಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ರಿಪಬ್ಲಿಕ್ ಭಾರತ್ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ‘ಕೋಮು ದ್ವೇಷವನ್ನು ಪ್ರಚೋದಿಸಿದ್ದಾರೆ’ ಎಂಬ ದೂರುಗಳ ಆಧಾರದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕರ ವಿರುದ್ಧ ನೋಂದಾಯಿಸಲಾದ ಎಫ್ಆರ್‌ಐಗಳನ್ನು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರ್ನಾಬ್‌ ವಿರುದ್ಧ ಪಾಲ್ಘರ್ ಲಿಂಚಿಂಗ್ ಘಟನೆಯನ್ನು ಕೋಮುವಾದೀಕರಿಸಿದ್ದರು ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ವಯಕ್ತಿಕ ತೇಜೋವಧೆ ನಡೆಸಿದ್ದರು ಎಂಬ ಆರೋಪಗಳಿವೆ.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...