HomeUncategorizedಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ರಿಪಬ್ಲಿಕ್ ಭಾರತ್ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ‘ಕೋಮು ದ್ವೇಷವನ್ನು ಪ್ರಚೋದಿಸಿದ್ದಾರೆ’ ಎಂಬ ದೂರುಗಳ ಆಧಾರದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕರ ವಿರುದ್ಧ ನೋಂದಾಯಿಸಲಾದ ಎಫ್ಆರ್‌ಐಗಳನ್ನು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರ್ನಾಬ್‌ ವಿರುದ್ಧ ಪಾಲ್ಘರ್ ಲಿಂಚಿಂಗ್ ಘಟನೆಯನ್ನು ಕೋಮುವಾದೀಕರಿಸಿದ್ದರು ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ವಯಕ್ತಿಕ ತೇಜೋವಧೆ ನಡೆಸಿದ್ದರು ಎಂಬ ಆರೋಪಗಳಿವೆ.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...