Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...