Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...