Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...