Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...