Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...