Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...