Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...