Homeಕರ್ನಾಟಕಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಮಕ್ಕಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದೆ

- Advertisement -
- Advertisement -

ಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಚಿತ್ರದುರ್ಗದ ಮುರುಘ ಮಠದ ಮುಖ್ಯಸ್ಥ ಶಿವಮೂರ್ತಿ ಮುರುಘಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯವು ಗುರುವಾರ ಮುಂದೂಡಿದೆ. ಜೊತೆಗೆ ರಾಜ್ಯ ಪೊಲೀಸರು ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಒತ್ತಡ ಹೆಚ್ಚಾಗಿದೆ.

ಅತ್ಯಾಚಾರ ಆರೋಪದ ಪ್ರಮುಖ ಆರೋಪಿಯಾಗಿರುವ ಅವರ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ  ಕ್ರಮ  (ಎನ್‌ಸಿಪಿಸಿಆರ್) ಮತ್ತು ರಾಜ್ಯ ಮಕ್ಕಳ ಆಯೋಗವು ಚಿತ್ರದುರ್ಗ ಎಸ್ಪಿ ಪರಶುರಾಮ್ ಅವರನ್ನು ಕೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಎಸ್‌ಪಿಯಿಂದ 9 ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಉತ್ತರಗಳನ್ನು ಕೇಳಿದ್ದು, ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಹೇಳಿದೆ. ಈ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಮಕ್ಕಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಇದನ್ನೂ ಓದಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮುರುಘಾ ಶರಣರ ವಿರುದ್ಧ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಮತ್ತು ಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....