ಶಾಹೀನ್ಬಾಗ್ನಲ್ಲಿ ಸಿಎಎ ವಿರುದ್ಧದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ಕಪಿಲ್ ಗುರ್ಜಾರ್ ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾನೆ.
ಪ್ರತಿಭಟನೆಯ ನಡುವೆ 3 ಬಾರಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದನು. ಇದಾದ ನಂತರ ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಈಗ ಅಧಿಕೃತವಾಗಿ ಈತ ಬಿಜೆಪಿಗೆ ಸೇರ್ಪಡೆಯಾಗಿದ್ದಾನೆ.
ಈ ಕುರಿತು ಪ್ರಶಾಂತ್ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದು, “ಮೊದಲು: ದೆಹಲಿಯ ಜಾಮಿಯಾ ಪ್ರದೇಶದಲ್ಲಿ ಸಿಎಎ ವಿರುದ್ಧದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದನು. ಈಗ: ಅಧಿಕೃತವಾಗಿ ಆಡಳಿತ ಪಕ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾನೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್ 2020 ರ ಪ್ರಭಾವಶಾಲಿ ವ್ಯಕ್ತಿ
Then: He opened fire on anti-CAA protestors at Delhi’s Jamia area.
Now: He officially joins the ruling Bharatiya Janta Party (BJP).
Kapil Gujjar, ladies and gentlemen! pic.twitter.com/c3DOdaLPeg
— Prashant Kumar (@scribe_prashant) December 30, 2020
ಇದನ್ನೂ ಓದಿ: ಶಾಹೀನ್ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್
ಈ ವರ್ಷದ ಆರಂಭದಲ್ಲಿ ದೇಶದಾದ್ಯಂತ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯ ಕೇಂದ್ರ ಬಿಂದುವಾಗಿದ್ದ ಶಾಹೀನ್ ಬಾಗ್, ಆಡಳಿತ ಪಕ್ಷಕ್ಕೆ ದೊಡ್ಡ ತಲೆನೋವಾಗಿತ್ತು. ಹಾಗಾಗಿಯೇ ಅಲ್ಲಿ ಗಲಭೆ ಸೃಷ್ಟಿಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು ಎಂದು ಹಲವರು ಆರೋಪಿಸಿದ್ದರು.
ಆದರೆ ಈಗ ಇದು ಸಾಕ್ಷಿ ಸಮೇತ ಸಾಬೀತಾಗಿದೆ…!
ಇದನ್ನೂ ಓದಿ: ಶಾಹೀನ್ಬಾಗ್ ಪ್ರತಿಭಟನಾಕಾರರ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದೇಕೆ?