Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...