Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...