Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...