Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...