Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...