Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...