Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

- Advertisement -
- Advertisement -

ದಡಾರದ ರುಬೆಲ್ಲಾ ಲಸಿಕೆಯಿಂದ ಮಕ್ಕಳು ಮೃತಪಡುವುದು ಅಪರೂಪದಲ್ಲೇ ಅಪರೂಪ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಹಿಮಾಂಶು ಅವರು ಬೆಳಗಾವಿಯಲ್ಲಿ ಮೂವರು ಮಕ್ಕಳ ಸಾವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ರುಬೆಲ್ಲಾ ಲಸಿಕೆಯು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಸುಮಾರು 40-50 ವರ್ಷದಿಂದ ಇದನ್ನು ನೀಡಲಾಗುತ್ತಿದೆ. ಇದರಿಂದಾಗಿ ಮಕ್ಕಳು ಮೃತಪಟ್ಟ ಸುದ್ದಿಯನ್ನು ನಾನಂತೂ ಕೇಳಿಲ್ಲ, ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕಳೆದ ವಾರ ದಡಾರದ ರುಬೆಲ್ಲಾ ಲಸಿಕೆ ಪಡೆದುಕೊಂಡಿದ್ದ ಮೂವರು ಮಕ್ಕಳ ಮೃತಪಟ್ಟಿದ್ದರು. ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರದಲ್ಲಿ ಒಂದು ಮಗು ಮೃತಪಟ್ಟರೆ, ಜನವರಿ 12 ರಂದು ಬೋಚಬಾಲ ಗ್ರಾಮದಲ್ಲಿ ಇಬ್ಬರು ಶಿಶುಗಳು ಮೃತಪಟ್ಟಿದ್ದವು. ಇನ್ನೂ ಇಬ್ಬರು ಶಿಶುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಈ ಬಗ್ಗೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಡಾ. ಹಿಮಾಂಶು, “ಸಧ್ಯಕ್ಕೆ ಪ್ರಾಥಮಿಕ ತನಿಖೆಯಷ್ಟೇ ಬಂದಿದೆ. ಪೂರ್ತಿ ತನಿಖೆಯಲ್ಲಿ ಏನು ನಡೆದಿದೆ ಎಂದು ತಿಳಿಯಬಹುದು. ಅಸೆಪ್ಟಿಕ್ ಶಾಕ್ ಸಿಂಡ್ರೋಂನಿಂದ ಸಾಯುವುದು ತುಂಬಾ ಕಡಿಮೆ. ಅಲ್ಲದೆ ರುಬೆಲ್ಲಾ ಲಸಿಕೆಯಿಂದಾಗಿ ಸಾವು ಸಂಭವಿಸುವುದಿಲ್ಲ, ಅದನ್ನು ಕೋಲ್ಡ್‌ ಸ್ಟೋರೇಜ್ ಮಾಡಿದಾಗ ಅದರ ಟೆಂಪರೇಚರ್‌ನಲ್ಲಿ ವ್ಯತ್ಯಾಸ ಆದರೆ ಲಸಿಕೆಯ ಶಕ್ತಿ ಕಡಿಮೆಯಾಗುತ್ತದೆಯೆ ಹೊರತು ಅದರಿಂದ ಸಾವು ಉಂಟಾಗುವುದಿಲ್ಲ” ಎಂದು ಹೇಳಿದ್ದಾರೆ.

“ಲಸಿಕೆ ಚುಚ್ಚುವ ಸಿರಿಂಜ್ ಸರಿಯಿಲ್ಲದಿದ್ದರೆ ಅಥವಾ ಸಿರಿಂಜ್ ಸರಿಯಾಗಿ ಸಂಗ್ರಹ ಮಾಡದೆ ಇದ್ದರೆ ಹಾಗೂ ಗಲೀಜಾಗಿದ್ದರೆ, ಅಸೆಪ್ಟಿಕ್‌ ಶಾಕ್ ಸಿಂಡ್ರೋಂ ಆಗುತ್ತದೆ. ಅಸೆಪ್ಟಿಕ್ ಶಾಕ್‌‌ ಸಿಂಡ್ರೋಂ ಕೂಡಾ ಅಷ್ಟು ಸುಲಭದಲ್ಲಿ ಆಗುವುದಿಲ್ಲ. ಮಕ್ಕಳು ಅಪೌಷ್ಠಿಕತೆಯಲ್ಲಿದ್ದರೆ ಮತ್ತು ಅವರಿಗೆ ಇತರ ಸಮಸ್ಯೆ ಇದ್ದು ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಮಾತ್ರ ಸಾವು ಸಂಭವಿಸುತ್ತದೆ. ಪ್ರಾಥಮಿಕ ತನಿಖೆಯಿಂದ ಕೂಡಾ ಏನೂ ಹೇಳಲು ಸಾಧ್ಯವಿಲ್ಲ. ಅದರ ಬಗ್ಗೆ ಸೂಕ್ತ ತನಿಖೆ ನಡೆಯಬೇಕು” ಎಂದು ಅವರು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ:ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...