Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

- Advertisement -
- Advertisement -

ದಡಾರದ ರುಬೆಲ್ಲಾ ಲಸಿಕೆಯಿಂದ ಮಕ್ಕಳು ಮೃತಪಡುವುದು ಅಪರೂಪದಲ್ಲೇ ಅಪರೂಪ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಹಿಮಾಂಶು ಅವರು ಬೆಳಗಾವಿಯಲ್ಲಿ ಮೂವರು ಮಕ್ಕಳ ಸಾವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ರುಬೆಲ್ಲಾ ಲಸಿಕೆಯು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಸುಮಾರು 40-50 ವರ್ಷದಿಂದ ಇದನ್ನು ನೀಡಲಾಗುತ್ತಿದೆ. ಇದರಿಂದಾಗಿ ಮಕ್ಕಳು ಮೃತಪಟ್ಟ ಸುದ್ದಿಯನ್ನು ನಾನಂತೂ ಕೇಳಿಲ್ಲ, ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕಳೆದ ವಾರ ದಡಾರದ ರುಬೆಲ್ಲಾ ಲಸಿಕೆ ಪಡೆದುಕೊಂಡಿದ್ದ ಮೂವರು ಮಕ್ಕಳ ಮೃತಪಟ್ಟಿದ್ದರು. ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರದಲ್ಲಿ ಒಂದು ಮಗು ಮೃತಪಟ್ಟರೆ, ಜನವರಿ 12 ರಂದು ಬೋಚಬಾಲ ಗ್ರಾಮದಲ್ಲಿ ಇಬ್ಬರು ಶಿಶುಗಳು ಮೃತಪಟ್ಟಿದ್ದವು. ಇನ್ನೂ ಇಬ್ಬರು ಶಿಶುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಈ ಬಗ್ಗೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಡಾ. ಹಿಮಾಂಶು, “ಸಧ್ಯಕ್ಕೆ ಪ್ರಾಥಮಿಕ ತನಿಖೆಯಷ್ಟೇ ಬಂದಿದೆ. ಪೂರ್ತಿ ತನಿಖೆಯಲ್ಲಿ ಏನು ನಡೆದಿದೆ ಎಂದು ತಿಳಿಯಬಹುದು. ಅಸೆಪ್ಟಿಕ್ ಶಾಕ್ ಸಿಂಡ್ರೋಂನಿಂದ ಸಾಯುವುದು ತುಂಬಾ ಕಡಿಮೆ. ಅಲ್ಲದೆ ರುಬೆಲ್ಲಾ ಲಸಿಕೆಯಿಂದಾಗಿ ಸಾವು ಸಂಭವಿಸುವುದಿಲ್ಲ, ಅದನ್ನು ಕೋಲ್ಡ್‌ ಸ್ಟೋರೇಜ್ ಮಾಡಿದಾಗ ಅದರ ಟೆಂಪರೇಚರ್‌ನಲ್ಲಿ ವ್ಯತ್ಯಾಸ ಆದರೆ ಲಸಿಕೆಯ ಶಕ್ತಿ ಕಡಿಮೆಯಾಗುತ್ತದೆಯೆ ಹೊರತು ಅದರಿಂದ ಸಾವು ಉಂಟಾಗುವುದಿಲ್ಲ” ಎಂದು ಹೇಳಿದ್ದಾರೆ.

“ಲಸಿಕೆ ಚುಚ್ಚುವ ಸಿರಿಂಜ್ ಸರಿಯಿಲ್ಲದಿದ್ದರೆ ಅಥವಾ ಸಿರಿಂಜ್ ಸರಿಯಾಗಿ ಸಂಗ್ರಹ ಮಾಡದೆ ಇದ್ದರೆ ಹಾಗೂ ಗಲೀಜಾಗಿದ್ದರೆ, ಅಸೆಪ್ಟಿಕ್‌ ಶಾಕ್ ಸಿಂಡ್ರೋಂ ಆಗುತ್ತದೆ. ಅಸೆಪ್ಟಿಕ್ ಶಾಕ್‌‌ ಸಿಂಡ್ರೋಂ ಕೂಡಾ ಅಷ್ಟು ಸುಲಭದಲ್ಲಿ ಆಗುವುದಿಲ್ಲ. ಮಕ್ಕಳು ಅಪೌಷ್ಠಿಕತೆಯಲ್ಲಿದ್ದರೆ ಮತ್ತು ಅವರಿಗೆ ಇತರ ಸಮಸ್ಯೆ ಇದ್ದು ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಮಾತ್ರ ಸಾವು ಸಂಭವಿಸುತ್ತದೆ. ಪ್ರಾಥಮಿಕ ತನಿಖೆಯಿಂದ ಕೂಡಾ ಏನೂ ಹೇಳಲು ಸಾಧ್ಯವಿಲ್ಲ. ಅದರ ಬಗ್ಗೆ ಸೂಕ್ತ ತನಿಖೆ ನಡೆಯಬೇಕು” ಎಂದು ಅವರು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ:ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...