Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

- Advertisement -
- Advertisement -

ದಡಾರದ ರುಬೆಲ್ಲಾ ಲಸಿಕೆಯಿಂದ ಮಕ್ಕಳು ಮೃತಪಡುವುದು ಅಪರೂಪದಲ್ಲೇ ಅಪರೂಪ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಹಿಮಾಂಶು ಅವರು ಬೆಳಗಾವಿಯಲ್ಲಿ ಮೂವರು ಮಕ್ಕಳ ಸಾವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ರುಬೆಲ್ಲಾ ಲಸಿಕೆಯು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಸುಮಾರು 40-50 ವರ್ಷದಿಂದ ಇದನ್ನು ನೀಡಲಾಗುತ್ತಿದೆ. ಇದರಿಂದಾಗಿ ಮಕ್ಕಳು ಮೃತಪಟ್ಟ ಸುದ್ದಿಯನ್ನು ನಾನಂತೂ ಕೇಳಿಲ್ಲ, ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕಳೆದ ವಾರ ದಡಾರದ ರುಬೆಲ್ಲಾ ಲಸಿಕೆ ಪಡೆದುಕೊಂಡಿದ್ದ ಮೂವರು ಮಕ್ಕಳ ಮೃತಪಟ್ಟಿದ್ದರು. ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರದಲ್ಲಿ ಒಂದು ಮಗು ಮೃತಪಟ್ಟರೆ, ಜನವರಿ 12 ರಂದು ಬೋಚಬಾಲ ಗ್ರಾಮದಲ್ಲಿ ಇಬ್ಬರು ಶಿಶುಗಳು ಮೃತಪಟ್ಟಿದ್ದವು. ಇನ್ನೂ ಇಬ್ಬರು ಶಿಶುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಈ ಬಗ್ಗೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಡಾ. ಹಿಮಾಂಶು, “ಸಧ್ಯಕ್ಕೆ ಪ್ರಾಥಮಿಕ ತನಿಖೆಯಷ್ಟೇ ಬಂದಿದೆ. ಪೂರ್ತಿ ತನಿಖೆಯಲ್ಲಿ ಏನು ನಡೆದಿದೆ ಎಂದು ತಿಳಿಯಬಹುದು. ಅಸೆಪ್ಟಿಕ್ ಶಾಕ್ ಸಿಂಡ್ರೋಂನಿಂದ ಸಾಯುವುದು ತುಂಬಾ ಕಡಿಮೆ. ಅಲ್ಲದೆ ರುಬೆಲ್ಲಾ ಲಸಿಕೆಯಿಂದಾಗಿ ಸಾವು ಸಂಭವಿಸುವುದಿಲ್ಲ, ಅದನ್ನು ಕೋಲ್ಡ್‌ ಸ್ಟೋರೇಜ್ ಮಾಡಿದಾಗ ಅದರ ಟೆಂಪರೇಚರ್‌ನಲ್ಲಿ ವ್ಯತ್ಯಾಸ ಆದರೆ ಲಸಿಕೆಯ ಶಕ್ತಿ ಕಡಿಮೆಯಾಗುತ್ತದೆಯೆ ಹೊರತು ಅದರಿಂದ ಸಾವು ಉಂಟಾಗುವುದಿಲ್ಲ” ಎಂದು ಹೇಳಿದ್ದಾರೆ.

“ಲಸಿಕೆ ಚುಚ್ಚುವ ಸಿರಿಂಜ್ ಸರಿಯಿಲ್ಲದಿದ್ದರೆ ಅಥವಾ ಸಿರಿಂಜ್ ಸರಿಯಾಗಿ ಸಂಗ್ರಹ ಮಾಡದೆ ಇದ್ದರೆ ಹಾಗೂ ಗಲೀಜಾಗಿದ್ದರೆ, ಅಸೆಪ್ಟಿಕ್‌ ಶಾಕ್ ಸಿಂಡ್ರೋಂ ಆಗುತ್ತದೆ. ಅಸೆಪ್ಟಿಕ್ ಶಾಕ್‌‌ ಸಿಂಡ್ರೋಂ ಕೂಡಾ ಅಷ್ಟು ಸುಲಭದಲ್ಲಿ ಆಗುವುದಿಲ್ಲ. ಮಕ್ಕಳು ಅಪೌಷ್ಠಿಕತೆಯಲ್ಲಿದ್ದರೆ ಮತ್ತು ಅವರಿಗೆ ಇತರ ಸಮಸ್ಯೆ ಇದ್ದು ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಮಾತ್ರ ಸಾವು ಸಂಭವಿಸುತ್ತದೆ. ಪ್ರಾಥಮಿಕ ತನಿಖೆಯಿಂದ ಕೂಡಾ ಏನೂ ಹೇಳಲು ಸಾಧ್ಯವಿಲ್ಲ. ಅದರ ಬಗ್ಗೆ ಸೂಕ್ತ ತನಿಖೆ ನಡೆಯಬೇಕು” ಎಂದು ಅವರು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ:ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...