Homeಚಳವಳಿಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು: ದಿಶಾ ರವಿ

ಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು: ದಿಶಾ ರವಿ

‘ನಾವು ಪ್ರತಿದಿನ ಬೆದರಿಕೆಗೆ ಒಳಗಾಗುತ್ತಲೆ ಇರುತ್ತೇವೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ. ಆದರೂ ಹೋರಾಟವನ್ನು ಮುಂದುವರೆಸುತ್ತೇವೆ’ ಎಂದು ಆದಿವಾಸಿ ಹೋರಾಟಗಾರ್ತಿ ಸೋನಿ ಸೂರಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯವಾಗಿ ಸುದ್ದಿಯಾಗಿದ್ದ ಪರಿಸರ ಹೋರಾಟಗಾರ್ತಿ ದಿಶಾ ರವಿ, ಕಳೆದ ತಿಂಗಳು ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಇದೀಗ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ದೇಶದ್ರೋಹದ ಆರೋಪ ಮತ್ತು ಮಾಧ್ಯಮಗಳು ತನ್ನ ಮೇಲೆ ನಡೆಸಿದ ದಾಳಿಯನ್ನು “ಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು” ಎಂದು ದಿಶಾ ರವಿ ಖಂಡಿಸಿದ್ದಾರೆ.

22 ವರ್ಷದ ದಿಶಾ ರವಿ ಅವರನ್ನು ಗ್ರೇಟಾ ಥನ್‌ಬರ್ಗ್ ಕಳೆದ ಫೆಬ್ರವರಿಯಲ್ಲಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್ ಪ್ರಕರಣದಲ್ಲಿ ಬಂದಿಸಲಾಗಿತ್ತು. ದೆಹಲಿ ಪೊಲೀಸರು ಈ ಟೂಲ್‌ಕಿಟ್‌ ದಿಶಾ ರವಿ ತಯಾರಿಸಿದ್ದರು ಎಂದು ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿದ್ದರು. ಅವರ ಬಂಧನದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಟೀಕೆಗೊಳಗಾಗಿತ್ತು. ಬಂಧನಕ್ಕೊಳಗಾದ ಹತ್ತು ದಿನಗಳ ನಂತರ ದೆಹಲಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಇದನ್ನೂ ಓದಿ: ದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

“ತಿಹಾರ್ ಜೈಲಿನಲ್ಲಿದ್ದಾಗ, ಪ್ರತಿದಿನ, ಪ್ರತಿ ಗಂಟೆ, ಪ್ರತಿ ನಿಮಿಷ, ಪ್ರತಿ ಸೆಕೆಂಡಿನ ಬಗ್ಗೆ ನನಗೆ ಅರಿವಿತ್ತು. ನನ್ನನ್ನು ಶೆಲ್ ನಲ್ಲಿ ಕೂಡಿ ಹಾಕಿ ಬೀಗ ಹಾಕಿದರು. ಭೂಮಿಯ ಉಳಿವಿಗಾಗಿ ಯೋಚಿಸುವುದು ಯಾವಾಗಿನಿಂದ ಅಪರಾಧವಾಗಿದೆ ಎಂದು ಅಚ್ಚರಿಯಾಯಿತು. ರೈತರಾಗಿದ್ದ ನನ್ನ ಅಜ್ಜಿ-ತಾತ ನಾನು ಪರಿಸರ ಹೋರಾಟಗಾರ್ತಿಯಾಗಲು ಪ್ರೇರಣೆಯಾಗಿದ್ದರು” ಎಂದು ಅವರು ಬರೆದುಕೊಂಡಿದ್ದಾರೆ.

“ನನ್ನ ಸ್ವಾಯತ್ತತೆಯನ್ನು ಉಲ್ಲಂಘಿಸಲಾಗಿದ್ದು, ಮಾಧ್ಯಮಗಳು ಟಿಆರ್‌ಪಿಗಾಗಿ ನನ್ನ ಚಿತ್ರಗಳನ್ನು ಪದೇಪದೆ ತೋರಿಸಿ ನನ್ನ ಚಟುವಟಿಕೆಗನ್ನು ತಪ್ಪು ಎಂದು ಘೋಷಿಸಿದವಯ. ಆದರೆ ನ್ಯಾಯಾಲಯದಲ್ಲಿ ಅಲ್ಲ. ಮಾಧ್ಯಮಗಳು ಅವರ ತೃಪ್ತಿಗಾಗಿ ನನ್ನ ಬಗ್ಗೆ ಸೃಷ್ಟಿಸಿದ ಸುಳ್ಳುಗಳ ಅರಿವಿಲ್ಲದ ನಾನು ಜೈಲಿನಲ್ಲಿ ಕುಳಿತಿದ್ದೆ” ಎಂದು ಅವರು ತನ್ನ ನಾಲ್ಕು ಪುಟಗಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನ್ನ ಬೆಂಬಲಕ್ಕೆ ನಿಂತ ಮತ್ತು ಕಾನೂನು ಹೋರಾಟಕ್ಕೆ ಸಹರಿಸಿದ ಎಲ್ಲರಿಗೂ ದಿಶಾ ರವಿ ಕೃತಜ್ಞತೆಯನ್ನು ಸಲ್ಲಿಸಿರುವ ಅವರು, ಪತ್ರದ ಕೊನೆಯಲ್ಲಿ “ನಾವು ಪ್ರತಿದಿನ ಬೆದರಿಕೆಗೆ ಒಳಗಾಗುತ್ತಲೆ ಇರುತ್ತೇವೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ. ಆದರೂ ಹೋರಾಟವನ್ನು ಮುಂದುವರೆಸುತ್ತೇವೆ’’ ಎಂದು ಚತ್ತೀಸ್‌ಗಡದ ಆದಿವಾಸಿ ಹೋರಾಟಗಾರ್ತಿ ಸೋನಿ ಸೂರಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ‘ಹವಾಮಾನ’ದ ನ್ಯಾಯಕ್ಕಾಗಿ ಹೋರಾಟ ಮುಂದುವರೆಯುತ್ತದೆ ಎಂದು ಅವರು ಪತ್ರವನ್ನು ಮುಗಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...