Homeಚಳವಳಿಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು: ದಿಶಾ ರವಿ

ಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು: ದಿಶಾ ರವಿ

‘ನಾವು ಪ್ರತಿದಿನ ಬೆದರಿಕೆಗೆ ಒಳಗಾಗುತ್ತಲೆ ಇರುತ್ತೇವೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ. ಆದರೂ ಹೋರಾಟವನ್ನು ಮುಂದುವರೆಸುತ್ತೇವೆ’ ಎಂದು ಆದಿವಾಸಿ ಹೋರಾಟಗಾರ್ತಿ ಸೋನಿ ಸೂರಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಅಂತಾರಾಷ್ಟ್ರೀಯವಾಗಿ ಸುದ್ದಿಯಾಗಿದ್ದ ಪರಿಸರ ಹೋರಾಟಗಾರ್ತಿ ದಿಶಾ ರವಿ, ಕಳೆದ ತಿಂಗಳು ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಇದೀಗ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ದೇಶದ್ರೋಹದ ಆರೋಪ ಮತ್ತು ಮಾಧ್ಯಮಗಳು ತನ್ನ ಮೇಲೆ ನಡೆಸಿದ ದಾಳಿಯನ್ನು “ಟಿಆರ್‌ಪಿ ಹಿಂದೆ ಬಿದ್ದಿರುವವರು ನನ್ನನ್ನು ತಪ್ಪಿತಸ್ಥಳೆಂದು ಘೋಷಿಸಿದರು” ಎಂದು ದಿಶಾ ರವಿ ಖಂಡಿಸಿದ್ದಾರೆ.

22 ವರ್ಷದ ದಿಶಾ ರವಿ ಅವರನ್ನು ಗ್ರೇಟಾ ಥನ್‌ಬರ್ಗ್ ಕಳೆದ ಫೆಬ್ರವರಿಯಲ್ಲಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್ ಪ್ರಕರಣದಲ್ಲಿ ಬಂದಿಸಲಾಗಿತ್ತು. ದೆಹಲಿ ಪೊಲೀಸರು ಈ ಟೂಲ್‌ಕಿಟ್‌ ದಿಶಾ ರವಿ ತಯಾರಿಸಿದ್ದರು ಎಂದು ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿದ್ದರು. ಅವರ ಬಂಧನದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಟೀಕೆಗೊಳಗಾಗಿತ್ತು. ಬಂಧನಕ್ಕೊಳಗಾದ ಹತ್ತು ದಿನಗಳ ನಂತರ ದೆಹಲಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಇದನ್ನೂ ಓದಿ: ದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

“ತಿಹಾರ್ ಜೈಲಿನಲ್ಲಿದ್ದಾಗ, ಪ್ರತಿದಿನ, ಪ್ರತಿ ಗಂಟೆ, ಪ್ರತಿ ನಿಮಿಷ, ಪ್ರತಿ ಸೆಕೆಂಡಿನ ಬಗ್ಗೆ ನನಗೆ ಅರಿವಿತ್ತು. ನನ್ನನ್ನು ಶೆಲ್ ನಲ್ಲಿ ಕೂಡಿ ಹಾಕಿ ಬೀಗ ಹಾಕಿದರು. ಭೂಮಿಯ ಉಳಿವಿಗಾಗಿ ಯೋಚಿಸುವುದು ಯಾವಾಗಿನಿಂದ ಅಪರಾಧವಾಗಿದೆ ಎಂದು ಅಚ್ಚರಿಯಾಯಿತು. ರೈತರಾಗಿದ್ದ ನನ್ನ ಅಜ್ಜಿ-ತಾತ ನಾನು ಪರಿಸರ ಹೋರಾಟಗಾರ್ತಿಯಾಗಲು ಪ್ರೇರಣೆಯಾಗಿದ್ದರು” ಎಂದು ಅವರು ಬರೆದುಕೊಂಡಿದ್ದಾರೆ.

“ನನ್ನ ಸ್ವಾಯತ್ತತೆಯನ್ನು ಉಲ್ಲಂಘಿಸಲಾಗಿದ್ದು, ಮಾಧ್ಯಮಗಳು ಟಿಆರ್‌ಪಿಗಾಗಿ ನನ್ನ ಚಿತ್ರಗಳನ್ನು ಪದೇಪದೆ ತೋರಿಸಿ ನನ್ನ ಚಟುವಟಿಕೆಗನ್ನು ತಪ್ಪು ಎಂದು ಘೋಷಿಸಿದವಯ. ಆದರೆ ನ್ಯಾಯಾಲಯದಲ್ಲಿ ಅಲ್ಲ. ಮಾಧ್ಯಮಗಳು ಅವರ ತೃಪ್ತಿಗಾಗಿ ನನ್ನ ಬಗ್ಗೆ ಸೃಷ್ಟಿಸಿದ ಸುಳ್ಳುಗಳ ಅರಿವಿಲ್ಲದ ನಾನು ಜೈಲಿನಲ್ಲಿ ಕುಳಿತಿದ್ದೆ” ಎಂದು ಅವರು ತನ್ನ ನಾಲ್ಕು ಪುಟಗಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನ್ನ ಬೆಂಬಲಕ್ಕೆ ನಿಂತ ಮತ್ತು ಕಾನೂನು ಹೋರಾಟಕ್ಕೆ ಸಹರಿಸಿದ ಎಲ್ಲರಿಗೂ ದಿಶಾ ರವಿ ಕೃತಜ್ಞತೆಯನ್ನು ಸಲ್ಲಿಸಿರುವ ಅವರು, ಪತ್ರದ ಕೊನೆಯಲ್ಲಿ “ನಾವು ಪ್ರತಿದಿನ ಬೆದರಿಕೆಗೆ ಒಳಗಾಗುತ್ತಲೆ ಇರುತ್ತೇವೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ. ಆದರೂ ಹೋರಾಟವನ್ನು ಮುಂದುವರೆಸುತ್ತೇವೆ’’ ಎಂದು ಚತ್ತೀಸ್‌ಗಡದ ಆದಿವಾಸಿ ಹೋರಾಟಗಾರ್ತಿ ಸೋನಿ ಸೂರಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ‘ಹವಾಮಾನ’ದ ನ್ಯಾಯಕ್ಕಾಗಿ ಹೋರಾಟ ಮುಂದುವರೆಯುತ್ತದೆ ಎಂದು ಅವರು ಪತ್ರವನ್ನು ಮುಗಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...