Homeಮುಖಪುಟಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸುಶಾಂತ್ ಸಾವಿನ ತನಿಖೆಯನ್ನು ವರದಿ ಮಾಡುವಲ್ಲಿ ಸಂಯಮ ವಹಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮಾಧ್ಯಮಗಳಿಗೆ ನಿರ್ದೇಶನ ನೀಡಿತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ. ಸುಶಾಂತ್ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ವಹಿಸಿಕೊಂಡ ನಂತರದ ಅದರ ತನಿಖೆ ಕುರಿತಂತ ಮೊದಲ ಹೇಳಿಕೆ ಇದಾಗಿದೆ.

“ಸಿಬಿಐ ವ್ಯವಸ್ಥಿತ ಮತ್ತು ವೃತ್ತಿಪರವಾಗಿ ತನಿಖೆ ನಡೆಸುತ್ತಿದೆ. ಇದರ ಕುರಿತಂತೆ ಮಾಧ್ಯಮಗಳು ಮಾಡುತ್ತಿರುವ ವರದಿಗಳು ಕೇವಲ ಊಹೆಯಾಗಿದೆ. ಸಿಬಿಐ ನಿಯಮದಂತೆ, ಪ್ರಕರಣದ ಪ್ರಸ್ತುತ ತನಿಖೆ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಲಾಗುವುದಿಲ್ಲ” ಎಂದು ಆಯೋಗದ ವಕ್ತಾರರು ತಿಳಿಸಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

“ನಮ್ಮ ತಂಡದ ಸದಸ್ಯರು ತನಿಖೆಯ ಯಾವುದೇ ವಿವರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿಲ್ಲ. ಹಾಗಾಗಿ ತನಿಖೆಯ ಕುರಿತು ವರದಿ ಮಾಡಲಾದ ಮತ್ತು ಆರೋಪಿಸಲಾದ ವಿವರಗಳು ವಿಶ್ವಾಸಾರ್ಹವಲ್ಲ” ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿತ್ತು.

ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಈಗ ರಜಪೂತ ತಂದೆ ಕೆ.ಕೆ.ಸಿಂಗ್ ಅವರ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣವನ್ನು ಸಿಬಿಐ ಪರಿಶೀಲಿಸುತ್ತಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯವೂ ನಟನ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

ಸುಶಾಂತ್ ಸಾವಿನ ತನಿಖೆಯನ್ನು ವರದಿ ಮಾಡುವಲ್ಲಿ ಸಂಯಮ ವಹಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮಾಧ್ಯಮಗಳಿಗೆ ನಿರ್ದೇಶನ ನೀಡಿತು.

ಹಲವಾರು ಟಿವಿ ಸುದ್ದಿ ವಾಹಿನಿಗಳು ನಟ ರಿಯಾ ಚಕ್ರವರ್ತಿಯನ್ನು ಗುರಿಯಾಗಿಸಿಕೊಂಡಿದೆ. ಪ್ರಸ್ತುತ ಸುಶಾಂತ್ ಸಾವಿನಲ್ಲಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿ. ಆದರೆ ರಿಯಾ ಚಕ್ರವರ್ತಿ “ಸುಶಾಂತ್ ಕುಟುಂಬವು ಅವನನ್ನು ಮಾದಕ ದ್ರವ್ಯ ಸೇವಿಸುವಂತೆ ಮಾಡಿ ಆತ್ಮಹತ್ಯೆಗೆ ದೂಡಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರ, ನೆಟ್ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, “ಮಾಧ್ಯಮಗಳೂ ಸಹ ಚಕ್ರವರ್ತಿಯನ್ನು ಗುರಿಯಾಗಿಸಿಕೊಂಡಿದೆ” ಎಂದು ಟೀಕಿಸಿ, ತನಿಖಾ ಅಧಿಕಾರಿಗಳಿಗೆ ತಮ್ಮ ಕೆಲಸವನ್ನು ನ್ಯಾಯಯುತವಾಗಿ ಮಾಡಲು ಅವಕಾಶ ನೀಡಬೇಕು ಎಂದು ಹೇಳಿತ್ತು.

ಕಳೆದ ವಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮಾಧ್ಯಮ ಸಂಸ್ಥೆಗಳಿಗೆ “ಪತ್ರಿಕೋದ್ಯಮ ಮಾನದಂಡಗಳನ್ನು ಅನುಸರಿಸಲು, ಸೂಕ್ಷ್ಮತೆಯ ವಿಷಯಗಳ ವರದಿಯಿಂದ ದೂರವಿರಲು ಮತ್ತು ಈ ಪ್ರಕರಣದಲ್ಲಿ ವಿಚಾರಣೆ ನಡೆಸದಂತೆ” ಸಲಹೆ ನೀಡಿತ್ತು.


ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...