Homeಕರ್ನಾಟಕಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

- Advertisement -
- Advertisement -

“ಜೈನ ಧರ್ಮದವರು, ಕೆಲವು ಹಿಂದೂ ಮಹಿಳೆಯರು ತಲೆ ಮೇಲೆ ಸೆರಗು ಹಾಕಲ್ವಾ, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಸಾಕಲ್ವಾ, ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪ್ಪಟ ಹಾಕಿಕೊಂಡರೆ ನಿಮಗೇನು ತೊಂದರೆ. ಈ ವಿವಾದವನ್ನು ಸೃಷ್ಟಿಸಿದ್ದೇ ಬಿಜೆಪಿ. ಎರಡು ಧರ್ಮದವರನ್ನು ಕರೆದು ಬಗೆಹರಿಸಬಹುದಿತ್ತಲ್ಲ” ಎಂದು ಹೇಳುವ ಮೂಲಕ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ವಿವಾದ ಸೃಷ್ಟಿಸಿದ್ದಾರೆಂದು ಬಿಂಬಿಸಲಾಗುತ್ತಿದೆ.

‘ಹಿಜಾಬ್ ಸಮರ್ಥಿಸುವ ಭರದಲ್ಲಿ ಸಿದ್ದರಾಯ್ಯ ಲೂಸ್ ಟಾಕ್‌’ ಎಂದು ಮಾಧ್ಯಮಗಳು ಬಿಂಬಿಸಿ, ಸಿದ್ದರಾಮಯ್ಯನವರ ವಿರುದ್ಧ ಜನರನ್ನು ಎತ್ತಿಕಟ್ಟಲು ಯತ್ನಿಸುತ್ತಿರುವುದನ್ನು ಪ್ರಜ್ಞಾವಂತ ನಾಗರಿಕರು ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರಶ್ನೆ ಎತ್ತಿರುವ ಪತ್ರಕರ್ತ ಆದಿತ್ಯ ಭಾರದ್ವಾಜ್‌, “ಸಿದ್ಧರಾಮಯ್ಯನವರೇನೋ ಆಡಬಾರದ ಮಾತಾಡಿದ್ದಾರೆ ಎಂಬಂತೆ ನಮ್ಮ ಮಾಧ್ಯಮಗಳು, ಬಿಜೆಪಿ ಮತ್ತು ಸ್ವತಃ ಕಾಂಗ್ರೆಸ್ ಆಡುತ್ತಿದೆ. ಈ ಪಾಟಿ ಹಿಂದುತ್ವವನ್ನು ಒಪ್ಪಿಯೇ ರಾಜಕಾರಣ ಮಾಡುವುದಾದರೆ ಬಿಜೆಪಿಗೂ ಕಾಂಗ್ರೆಸ್ಸಿಗೂ ಫರಕ್ಕೇನು?” ಎಂದು ಕೇಳಿದ್ದಾರೆ.

ಮುಂದುವರಿದು, “ಜಗತ್ತಿನ ಎಲ್ಲ ಸಂಸ್ಕೃತಿಗಳಲ್ಲಿ ತಲೆ ಮೇಲೆ ಬಟ್ಟೆ ಹೊದೆಯುವ ಆಚಾರ, ಪರಿಪಾಠ ಇದೆ. ಅದನ್ನೇ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಅವರು ಹೇಳಿದ್ದರಲ್ಲಿ ಸ್ವಾಮೀಜಿಗಳಿಗೆ ಅಪಮಾನಕರವಾದದ್ದೇನಿದೆ ಅಂತ ಎಷ್ಟೇ ತಲೆ ಕೆರೆದುಕೊಂಡರೂ ಹುಣ್ಣಾಯಿತೇ ಹೊರತು ಅರ್ಥವಾಗಲಿಲ್ಲ! ಈ ರಾಜ್ಯದಲ್ಲಿಂದು ಸ್ವಾಮೀಜಿಗಳ ಪ್ರಸ್ತಾಪವೇ ಮಾಡುವ ಹಾಗಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರು ಮಾತಾಡಿದ ಕೆಲವೇ ನಿಮಿಷಗಳಲ್ಲಿ ನಮ್ಮ ಟಿವಿ ವಾಹಿನಿಗಳು ರಣಹದ್ದುಗಳಂತೆ ಮುಗಿಬಿದ್ದವು, ಸಿದ್ದರಾಮಯ್ಯರಿಂದ ಹಿಂದೂಗಳಿಗೆ, ಸ್ವಾಮೀಜಿಗಳಿಗೆ ಅಪಮಾನ, ಹಿಜಾಬ್ ಬೆಂಕಿಗೆ ಸಿದ್ದರಾಮಯ್ಯರಿಂದ ಪೆಟ್ರೋಲ್, ತುಪ್ಪ ಅಂತ ಅರಚಾಡಿದವು. ನಿರೀಕ್ಷೆಯಂತೆ ಹಿಂದೂಗಳ ಪ್ರತಿನಿಧಿಯಾಗಿ ಪ್ರಮೋದ್ ಮುತಾಲಿಕ್ ಥರದವರನ್ನು ಕರೆಸಿ ರಾಡಿ ಎಬ್ಬಿಸಿದರು. As a Hindu I feel deeply insulted to be represented by Pramod Muthalik and the likes. ಬಿಜೆಪಿಯ ಸಮಸ್ತ ನಾಯಕರೂ ಹಿಂದೂಗಳಿಗೆ ಆದ ಅಪಮಾನ ಎಂದು ಹುಯಿಲೆಬ್ಬಿಸಿದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ದಿನದ ಹಿಂದೆ ಹುಟ್ಟೂರು ಸಿದ್ದರಾಮಯ್ಯನ ಹುಂಡಿ ಜಾತ್ರೆಯಲ್ಲಿ ಮೈಮರೆತು ವೀರಮಕ್ಕಳ ಕುಣಿತ ಆಡುತ್ತಿದ್ದ ಸಿದ್ದರಾಮಯ್ಯ ಹಿಂದೂ ವಿರೋಧಿ ಆಗಿಬಿಟ್ಟರು! ಇನ್ನು ಇತ್ತ ಬ್ರಾಹ್ಮಣ್ಯ, ಹಿಂದುತ್ವದ ಮಾಧ್ಯಮಗಳು, ಬಿಜೆಪಿ ಅವರ ಮೇಲೆ ಕ್ರೂರ ದಾಳಿ ನಡೆಸಿದರೆ ಕಾಂಗ್ರೆಸ್ಸು ಅವರನ್ನು ಏಕಾಕಿ ಮಾಡಿಬಿಡ್ತು. ಸಿದ್ದರಾಮಯ್ಯನವರು ನೀಡುತ್ತಿರುವ ಸ್ಪಷ್ಟೀಕರಣ, ಅವರ ಬಾಡಿ ಲಾಂಗ್ವೇಜ್ ನೋಡಿ ನಿಜಕ್ಕೂ ಅಯ್ಯೋ ಎನಿಸಿತು. ಎಲ್ಲಿಗೆ ಬಂತು ಕರ್ನಾಟಕ? ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಆದಿತ್ಯ ಭಾರದ್ವಾಜ್ ಅವರಂತೆಯೇ ಅನೇಕ ನಾಗರಿಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾಗರಾಜ್‌ ಮೂರ್ತಿಗೌಡ ಅವರು, “ಈ ಮಾಧ್ಯಮಗಳು ಕಳೆದ ಏಳು ವರ್ಷದಿಂದ ನಿರಂತರವಾಗಿ ಬಿಜೆಪಿ ಪರವಾಗಿ ಮತ್ತು ಸಿದ್ದರಾಮಯ್ಯರ ವಿರುದ್ದ ನಿರಂತರವಾಗಿ ಸುಳ್ಳುಗಳನ್ನು ಹೇಳುತ್ತಿವೆ. ಈ ಸುಳ್ಳುಗಳಿಂದ ಮಾಧ್ಯಮಗಳಿಗೆ ಹೊಟ್ಟೆ ತುಂಬಾ ಅನ್ನ ಸಿಗಬಹುದು ಆದ್ರೆ ಬಡ ಜನತೆಯ ಹೊಟ್ಟೆಗೆ ತಣ್ಣಿರು ಬಟ್ಟೆ ಅಷ್ಟೇ ಸಿಕ್ಕಿದೆ…” ಎಂದು ಟೀಕಿಸಿದ್ದಾರೆ.

“ಮಾಧ್ಯಮಗಳು ಮೊದಲಿನಿಂದಲೂ ಇವರು ವಿರುದ್ಧ ನಿರಂತರವಾಗಿ ಸುಳ್ಳುಗಳನ್ನ ಹೇಳಿ ಅಪಪ್ರಚಾರ ಮಾಡುತ್ತಿವೆ ಇದೇನು ಹೊಸತಲ್ಲ ಮುಂದೇಯೂ ಮಾಡುತ್ತವೆ ಆದ್ರೆ ಜನರು ಮಾಧ್ಯಮಗಳನ್ನು Boycott ಮಾಡಬೇಕು ಅಷ್ಟೇ” ಎಂದು ಅಭಿಪ್ರಾಯಪಟ್ಟಿದ್ದಾರೆ.

ರವಿಕುಮಾರ್‌ ನರಭೋಳಿ ಅವರು, “ವಿಷಯ ಇಷ್ಟೊಂದು ಗಂಭೀರತೆ ಪಡೆದುಕೊಳ್ಳುತ್ತಿರುವುದೇ ಕೆಲ ಮಾಧ್ಯಮದ ಅತಿರಂಜಕತೆಯ ವರದಿಗಳಿಂದಾಗಿ. ಟಿವಿಗಳಲ್ಲಿ ಹದಿನೈದು‌ ದಿನ ಸುದ್ದಿ ಪ್ರಸಾರವಾಗದೇ ಇದ್ದರೆ ವಾತಾವರಣ ತಾನಾಗೆ ತಿಳಿಯಾಗುತ್ತದೆ” ಎಂದಿದ್ದಾರೆ.

“ಒಬ್ಬ ಜನಪರ ಇರುವ ನಾಯಕನನ್ನ ಹೇಗೆಲ್ಲ ಅವಮಾನಿಸಿ ಅಪಪ್ರಚಾರ ಮಾಡಿ ಸೋಲಿಸಬಹುದು. ಅಷ್ಟನ್ನು ಕಳೆದ ಚುನಾವಣೆಯಲ್ಲಿ ಮಾಡಿವೆ. ಇದರಿಂದ ಸಿದ್ದರಾಮಯ್ಯರವರಿಗೆ ಒಂದು ಚೂರು ಅನ್ಯಾಯ ಆಗಿಲ್ಲ. ಅನ್ಯಾಯ ಆಗಿರೋದು ಈ ರಾಜ್ಯದ ಬಡವರಿಗೆ, ನಿರ್ಗತಿಕರಿಗೆ, ಧೀನ ದಲಿತರಿಗೆ ಮತ್ತು ರಾಜ್ಯದ ಒಟ್ಟಾರೆ ಬಡವರಿಗೆ. ರಾಜ್ಯ ಅಭಿವೃದ್ಧಿ ಬಗ್ಗೆ ಈ ಮಾಧ್ಯಮಗಳು ಒಂದು ದಿನಾನು ಚರ್ಚೆ ಮಾಡ್ತಿಲ್ಲ. ದಿನ ಬೆಳಾಗದರೆ ಹಿಜಾಬ್, ಧರ್ಮ, ಮಂದಿರ, ಮಸೀದಿ, ಚರ್ಚ್, ಮುಸ್ಲಿಂ, ಮಠ, ಮಠಾಧೀಶರ ಬಗ್ಗೆ ಚರ್ಚೆ ಮಾಡಿ ಜನರನ್ನ ದಿಕ್ಕು ತಪ್ಪಿಸಿ ರಾಜ್ಯ ಮತ್ತು ದೇಶವನ್ನ ಹಾಳು ಮಾಡುತ್ತಿವೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತ ಶಶಿಧರ್‌ ಭಟ್‌ ಅವರು, “ಮಠಾಧಿಪತಿಗಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದು ತಪ್ಪೆ? ಮುಸ್ಲಿಮರು ಕಪ್ಪು ಬಟ್ಟೆ ಹಿಜಾಬ್‌ಗೆ ಬಳಸಿದರೆ ಹಿಂದೂಗಳು ಕೇಸರಿ ಬಳಸುತ್ತಾರೆ ಎರಡೂ ಒಂದೇ ಅಲ್ಲವೆ? ಬಿಜೆಪಿ ಮಾಧ್ಯಮಗಳ ಪ್ರಕಾರ ಇದು ಘೋರ ಅಪರಾಧ! ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿ ಬಿದ್ದ ಗೋದಿ ಮೀಡಿಯಾ.. ಬಿಜೆಪಿ ನಾಯಕರು ಕೆಲವು ಋಷಿಕುಮಾರ್ ಸ್ವಾಮಿಯಂತಹ ಸ್ವಾಮೀಜಿಗಳು” ಎಂಬ ಅಂಶಗಳನ್ನು ಒಳಗೊಂಡು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಯುವ ಕಾಂಗ್ರೆಸ್ ಮುಖಂಡ ಸುನಿಲ್‌ ಬೋಸ್‌ ಈ ಕುರಿತು ವಿಸ್ತೃತವಾಗಿ ಬರೆದಿದ್ದಾರೆ. “ಸಿದ್ದರಾಮಯ್ಯನವರ ವಿಷಯದಲ್ಲಿ ಕೆಲವೊಂದು ಮಾಧ್ಯಮಗಳಿಗೆ ಸಮೂಹ ಸನ್ನಿ ಹಿಡಿದಿದೆ. ನಾನು ಸೂಕ್ಷ್ಮವಾಗಿ ಗ್ರಹಿಸಿದಂತೆ ಮಾಧ್ಯಮಗಳು ಬೆಲೆ ಏರಿಕೆ, ಲಾಕ್ ಡೌನ್ ಸಂಕಷ್ಟಗಳು ಇತ್ಯಾದಿಗಳಿಂದ ಜನ ಸಾಮಾನ್ಯರಿಗೆ ಸರ್ಕಾರದ ದುರಾಡಳಿತದಿಂದ ಆಗುತ್ತಿರುವ ತೊಂದರೆಗಳನ್ನು ಪ್ರಶ್ನಿಸದೇ ಸೀದಾ ಸಿದ್ದರಾಮಯ್ಯ ಅವರ ಬಳಿಗೆ ಬಂದು ತಮಗೆ ಬೇಕಾದ ಪ್ರಶ್ನೆಗಳನ್ನು ಕೇಳಿ, ಅದಕ್ಕೆ ಸಿದ್ದರಾಮಯ್ಯ ಅವರಿಂದ ಬರುವ ಉತ್ತರವನ್ನು ಅವರಿಗೆ ಬೇಕಾದಂತೆ ಬಳಸಿಕೊಳ್ಳುತ್ತಿರುವುದು ಅತ್ಯಂತ ಸ್ಪಷ್ಟವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಹಿಂದೂ ದೇವಾಲಯಗಳ ಬಳಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ; ಕಾನೂನು ಏನು ಹೇಳುತ್ತದೆ?

“ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ/ಪ್ರಜಾಪ್ರಭುತ್ವದ ಕಾವಲುಗಾರ ಎಂದು ಹೇಳುತ್ತಾರೆ. ಆದರೆ ಇವರು ಕಾಂಗ್ರೆಸ್ ನವರನ್ನು ಕೇಳುವ ಪ್ರಶ್ನೆಗಳನ್ನು ಗಮನಿಸಿದರೆ ಇವರು ಮಾಧ್ಯಮ ಕಚೇರಿಗಳಿಂದ ಬರುತ್ತಾರೋ ಇಲ್ಲವೇ ಬಿಜೆಪಿ ಕಚೇರಿಯಿಂದ ಬರುತ್ತಾರೋ ಎಂದು ಗೊಂದಲವಾಗುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

“2018ರ ಸಂದರ್ಭದಲ್ಲಿ ಉತ್ತಮ ಆಡಳಿತಕ್ಕೆ ವಿರುದ್ಧವಾಗಿ ಧರ್ಮದ ಹೆಸರಲ್ಲಿ ದೊಡ್ಡ ಮಟ್ಟದ ಅಪ ಪ್ರಚಾರ ನಡೆಸುವಾಗಲೂ ಅವರಿಗೆ ಯಾವುದೇ ರೀತಿಯಲ್ಲಿ ಅಡೆ ತಡೆ ಉಂಟು ಮಾಡದೇ ಮಾಧ್ಯಮ ಸ್ವಾತಂತ್ರ್ಯ ಗೌರವಿಸಲಾಗಿತ್ತು. ಒಂದು ವೇಳೆ ನಮಗೆ ಮಾಡಿದಂತೆ ಈಗಿ‌ನ ಬಿಜೆಪಿಯ ಸರ್ವಾಧಿಕಾರಿ ಮನಸ್ಥಿತಿಯ ಪರಿಸ್ಥಿತಿಯಲ್ಲಿ ಮಾಧ್ಯಮಗಳು ಅವರ ವಿರುದ್ಧ ದನಿ ಎತ್ತಿದರೆ ಮಾಧ್ಯಮಗಳಿಗೆ ಉಳಿಗಾಲ ಉಂಟೇ?” ಎಂದು ಪ್ರಶ್ನಿಸಿದ್ದಾರೆ.

ಇದೇ ರೀತಿಯ ಹಲವಾರು ಬರಹಗಳು, ಕಟು ಟೀಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಾಧ್ಯಮಗಳು ವಿರೋಧ ಪಕ್ಷದ ವಿರೋಧ ಪಕ್ಷಗಳಂತೆ ವರ್ತಿಸುತ್ತಿರುವುದನ್ನು ಜನರು ಗುರುತಿಸುತ್ತಿದ್ದಾರೆ.


ಇದನ್ನೂ ಓದಿರಿ: ಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....