Homeಕರ್ನಾಟಕಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

- Advertisement -
- Advertisement -

“ಜೈನ ಧರ್ಮದವರು, ಕೆಲವು ಹಿಂದೂ ಮಹಿಳೆಯರು ತಲೆ ಮೇಲೆ ಸೆರಗು ಹಾಕಲ್ವಾ, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಸಾಕಲ್ವಾ, ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪ್ಪಟ ಹಾಕಿಕೊಂಡರೆ ನಿಮಗೇನು ತೊಂದರೆ. ಈ ವಿವಾದವನ್ನು ಸೃಷ್ಟಿಸಿದ್ದೇ ಬಿಜೆಪಿ. ಎರಡು ಧರ್ಮದವರನ್ನು ಕರೆದು ಬಗೆಹರಿಸಬಹುದಿತ್ತಲ್ಲ” ಎಂದು ಹೇಳುವ ಮೂಲಕ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ವಿವಾದ ಸೃಷ್ಟಿಸಿದ್ದಾರೆಂದು ಬಿಂಬಿಸಲಾಗುತ್ತಿದೆ.

‘ಹಿಜಾಬ್ ಸಮರ್ಥಿಸುವ ಭರದಲ್ಲಿ ಸಿದ್ದರಾಯ್ಯ ಲೂಸ್ ಟಾಕ್‌’ ಎಂದು ಮಾಧ್ಯಮಗಳು ಬಿಂಬಿಸಿ, ಸಿದ್ದರಾಮಯ್ಯನವರ ವಿರುದ್ಧ ಜನರನ್ನು ಎತ್ತಿಕಟ್ಟಲು ಯತ್ನಿಸುತ್ತಿರುವುದನ್ನು ಪ್ರಜ್ಞಾವಂತ ನಾಗರಿಕರು ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರಶ್ನೆ ಎತ್ತಿರುವ ಪತ್ರಕರ್ತ ಆದಿತ್ಯ ಭಾರದ್ವಾಜ್‌, “ಸಿದ್ಧರಾಮಯ್ಯನವರೇನೋ ಆಡಬಾರದ ಮಾತಾಡಿದ್ದಾರೆ ಎಂಬಂತೆ ನಮ್ಮ ಮಾಧ್ಯಮಗಳು, ಬಿಜೆಪಿ ಮತ್ತು ಸ್ವತಃ ಕಾಂಗ್ರೆಸ್ ಆಡುತ್ತಿದೆ. ಈ ಪಾಟಿ ಹಿಂದುತ್ವವನ್ನು ಒಪ್ಪಿಯೇ ರಾಜಕಾರಣ ಮಾಡುವುದಾದರೆ ಬಿಜೆಪಿಗೂ ಕಾಂಗ್ರೆಸ್ಸಿಗೂ ಫರಕ್ಕೇನು?” ಎಂದು ಕೇಳಿದ್ದಾರೆ.

ಮುಂದುವರಿದು, “ಜಗತ್ತಿನ ಎಲ್ಲ ಸಂಸ್ಕೃತಿಗಳಲ್ಲಿ ತಲೆ ಮೇಲೆ ಬಟ್ಟೆ ಹೊದೆಯುವ ಆಚಾರ, ಪರಿಪಾಠ ಇದೆ. ಅದನ್ನೇ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಅವರು ಹೇಳಿದ್ದರಲ್ಲಿ ಸ್ವಾಮೀಜಿಗಳಿಗೆ ಅಪಮಾನಕರವಾದದ್ದೇನಿದೆ ಅಂತ ಎಷ್ಟೇ ತಲೆ ಕೆರೆದುಕೊಂಡರೂ ಹುಣ್ಣಾಯಿತೇ ಹೊರತು ಅರ್ಥವಾಗಲಿಲ್ಲ! ಈ ರಾಜ್ಯದಲ್ಲಿಂದು ಸ್ವಾಮೀಜಿಗಳ ಪ್ರಸ್ತಾಪವೇ ಮಾಡುವ ಹಾಗಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರು ಮಾತಾಡಿದ ಕೆಲವೇ ನಿಮಿಷಗಳಲ್ಲಿ ನಮ್ಮ ಟಿವಿ ವಾಹಿನಿಗಳು ರಣಹದ್ದುಗಳಂತೆ ಮುಗಿಬಿದ್ದವು, ಸಿದ್ದರಾಮಯ್ಯರಿಂದ ಹಿಂದೂಗಳಿಗೆ, ಸ್ವಾಮೀಜಿಗಳಿಗೆ ಅಪಮಾನ, ಹಿಜಾಬ್ ಬೆಂಕಿಗೆ ಸಿದ್ದರಾಮಯ್ಯರಿಂದ ಪೆಟ್ರೋಲ್, ತುಪ್ಪ ಅಂತ ಅರಚಾಡಿದವು. ನಿರೀಕ್ಷೆಯಂತೆ ಹಿಂದೂಗಳ ಪ್ರತಿನಿಧಿಯಾಗಿ ಪ್ರಮೋದ್ ಮುತಾಲಿಕ್ ಥರದವರನ್ನು ಕರೆಸಿ ರಾಡಿ ಎಬ್ಬಿಸಿದರು. As a Hindu I feel deeply insulted to be represented by Pramod Muthalik and the likes. ಬಿಜೆಪಿಯ ಸಮಸ್ತ ನಾಯಕರೂ ಹಿಂದೂಗಳಿಗೆ ಆದ ಅಪಮಾನ ಎಂದು ಹುಯಿಲೆಬ್ಬಿಸಿದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ದಿನದ ಹಿಂದೆ ಹುಟ್ಟೂರು ಸಿದ್ದರಾಮಯ್ಯನ ಹುಂಡಿ ಜಾತ್ರೆಯಲ್ಲಿ ಮೈಮರೆತು ವೀರಮಕ್ಕಳ ಕುಣಿತ ಆಡುತ್ತಿದ್ದ ಸಿದ್ದರಾಮಯ್ಯ ಹಿಂದೂ ವಿರೋಧಿ ಆಗಿಬಿಟ್ಟರು! ಇನ್ನು ಇತ್ತ ಬ್ರಾಹ್ಮಣ್ಯ, ಹಿಂದುತ್ವದ ಮಾಧ್ಯಮಗಳು, ಬಿಜೆಪಿ ಅವರ ಮೇಲೆ ಕ್ರೂರ ದಾಳಿ ನಡೆಸಿದರೆ ಕಾಂಗ್ರೆಸ್ಸು ಅವರನ್ನು ಏಕಾಕಿ ಮಾಡಿಬಿಡ್ತು. ಸಿದ್ದರಾಮಯ್ಯನವರು ನೀಡುತ್ತಿರುವ ಸ್ಪಷ್ಟೀಕರಣ, ಅವರ ಬಾಡಿ ಲಾಂಗ್ವೇಜ್ ನೋಡಿ ನಿಜಕ್ಕೂ ಅಯ್ಯೋ ಎನಿಸಿತು. ಎಲ್ಲಿಗೆ ಬಂತು ಕರ್ನಾಟಕ? ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಆದಿತ್ಯ ಭಾರದ್ವಾಜ್ ಅವರಂತೆಯೇ ಅನೇಕ ನಾಗರಿಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾಗರಾಜ್‌ ಮೂರ್ತಿಗೌಡ ಅವರು, “ಈ ಮಾಧ್ಯಮಗಳು ಕಳೆದ ಏಳು ವರ್ಷದಿಂದ ನಿರಂತರವಾಗಿ ಬಿಜೆಪಿ ಪರವಾಗಿ ಮತ್ತು ಸಿದ್ದರಾಮಯ್ಯರ ವಿರುದ್ದ ನಿರಂತರವಾಗಿ ಸುಳ್ಳುಗಳನ್ನು ಹೇಳುತ್ತಿವೆ. ಈ ಸುಳ್ಳುಗಳಿಂದ ಮಾಧ್ಯಮಗಳಿಗೆ ಹೊಟ್ಟೆ ತುಂಬಾ ಅನ್ನ ಸಿಗಬಹುದು ಆದ್ರೆ ಬಡ ಜನತೆಯ ಹೊಟ್ಟೆಗೆ ತಣ್ಣಿರು ಬಟ್ಟೆ ಅಷ್ಟೇ ಸಿಕ್ಕಿದೆ…” ಎಂದು ಟೀಕಿಸಿದ್ದಾರೆ.

“ಮಾಧ್ಯಮಗಳು ಮೊದಲಿನಿಂದಲೂ ಇವರು ವಿರುದ್ಧ ನಿರಂತರವಾಗಿ ಸುಳ್ಳುಗಳನ್ನ ಹೇಳಿ ಅಪಪ್ರಚಾರ ಮಾಡುತ್ತಿವೆ ಇದೇನು ಹೊಸತಲ್ಲ ಮುಂದೇಯೂ ಮಾಡುತ್ತವೆ ಆದ್ರೆ ಜನರು ಮಾಧ್ಯಮಗಳನ್ನು Boycott ಮಾಡಬೇಕು ಅಷ್ಟೇ” ಎಂದು ಅಭಿಪ್ರಾಯಪಟ್ಟಿದ್ದಾರೆ.

ರವಿಕುಮಾರ್‌ ನರಭೋಳಿ ಅವರು, “ವಿಷಯ ಇಷ್ಟೊಂದು ಗಂಭೀರತೆ ಪಡೆದುಕೊಳ್ಳುತ್ತಿರುವುದೇ ಕೆಲ ಮಾಧ್ಯಮದ ಅತಿರಂಜಕತೆಯ ವರದಿಗಳಿಂದಾಗಿ. ಟಿವಿಗಳಲ್ಲಿ ಹದಿನೈದು‌ ದಿನ ಸುದ್ದಿ ಪ್ರಸಾರವಾಗದೇ ಇದ್ದರೆ ವಾತಾವರಣ ತಾನಾಗೆ ತಿಳಿಯಾಗುತ್ತದೆ” ಎಂದಿದ್ದಾರೆ.

“ಒಬ್ಬ ಜನಪರ ಇರುವ ನಾಯಕನನ್ನ ಹೇಗೆಲ್ಲ ಅವಮಾನಿಸಿ ಅಪಪ್ರಚಾರ ಮಾಡಿ ಸೋಲಿಸಬಹುದು. ಅಷ್ಟನ್ನು ಕಳೆದ ಚುನಾವಣೆಯಲ್ಲಿ ಮಾಡಿವೆ. ಇದರಿಂದ ಸಿದ್ದರಾಮಯ್ಯರವರಿಗೆ ಒಂದು ಚೂರು ಅನ್ಯಾಯ ಆಗಿಲ್ಲ. ಅನ್ಯಾಯ ಆಗಿರೋದು ಈ ರಾಜ್ಯದ ಬಡವರಿಗೆ, ನಿರ್ಗತಿಕರಿಗೆ, ಧೀನ ದಲಿತರಿಗೆ ಮತ್ತು ರಾಜ್ಯದ ಒಟ್ಟಾರೆ ಬಡವರಿಗೆ. ರಾಜ್ಯ ಅಭಿವೃದ್ಧಿ ಬಗ್ಗೆ ಈ ಮಾಧ್ಯಮಗಳು ಒಂದು ದಿನಾನು ಚರ್ಚೆ ಮಾಡ್ತಿಲ್ಲ. ದಿನ ಬೆಳಾಗದರೆ ಹಿಜಾಬ್, ಧರ್ಮ, ಮಂದಿರ, ಮಸೀದಿ, ಚರ್ಚ್, ಮುಸ್ಲಿಂ, ಮಠ, ಮಠಾಧೀಶರ ಬಗ್ಗೆ ಚರ್ಚೆ ಮಾಡಿ ಜನರನ್ನ ದಿಕ್ಕು ತಪ್ಪಿಸಿ ರಾಜ್ಯ ಮತ್ತು ದೇಶವನ್ನ ಹಾಳು ಮಾಡುತ್ತಿವೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತ ಶಶಿಧರ್‌ ಭಟ್‌ ಅವರು, “ಮಠಾಧಿಪತಿಗಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದು ತಪ್ಪೆ? ಮುಸ್ಲಿಮರು ಕಪ್ಪು ಬಟ್ಟೆ ಹಿಜಾಬ್‌ಗೆ ಬಳಸಿದರೆ ಹಿಂದೂಗಳು ಕೇಸರಿ ಬಳಸುತ್ತಾರೆ ಎರಡೂ ಒಂದೇ ಅಲ್ಲವೆ? ಬಿಜೆಪಿ ಮಾಧ್ಯಮಗಳ ಪ್ರಕಾರ ಇದು ಘೋರ ಅಪರಾಧ! ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿ ಬಿದ್ದ ಗೋದಿ ಮೀಡಿಯಾ.. ಬಿಜೆಪಿ ನಾಯಕರು ಕೆಲವು ಋಷಿಕುಮಾರ್ ಸ್ವಾಮಿಯಂತಹ ಸ್ವಾಮೀಜಿಗಳು” ಎಂಬ ಅಂಶಗಳನ್ನು ಒಳಗೊಂಡು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಯುವ ಕಾಂಗ್ರೆಸ್ ಮುಖಂಡ ಸುನಿಲ್‌ ಬೋಸ್‌ ಈ ಕುರಿತು ವಿಸ್ತೃತವಾಗಿ ಬರೆದಿದ್ದಾರೆ. “ಸಿದ್ದರಾಮಯ್ಯನವರ ವಿಷಯದಲ್ಲಿ ಕೆಲವೊಂದು ಮಾಧ್ಯಮಗಳಿಗೆ ಸಮೂಹ ಸನ್ನಿ ಹಿಡಿದಿದೆ. ನಾನು ಸೂಕ್ಷ್ಮವಾಗಿ ಗ್ರಹಿಸಿದಂತೆ ಮಾಧ್ಯಮಗಳು ಬೆಲೆ ಏರಿಕೆ, ಲಾಕ್ ಡೌನ್ ಸಂಕಷ್ಟಗಳು ಇತ್ಯಾದಿಗಳಿಂದ ಜನ ಸಾಮಾನ್ಯರಿಗೆ ಸರ್ಕಾರದ ದುರಾಡಳಿತದಿಂದ ಆಗುತ್ತಿರುವ ತೊಂದರೆಗಳನ್ನು ಪ್ರಶ್ನಿಸದೇ ಸೀದಾ ಸಿದ್ದರಾಮಯ್ಯ ಅವರ ಬಳಿಗೆ ಬಂದು ತಮಗೆ ಬೇಕಾದ ಪ್ರಶ್ನೆಗಳನ್ನು ಕೇಳಿ, ಅದಕ್ಕೆ ಸಿದ್ದರಾಮಯ್ಯ ಅವರಿಂದ ಬರುವ ಉತ್ತರವನ್ನು ಅವರಿಗೆ ಬೇಕಾದಂತೆ ಬಳಸಿಕೊಳ್ಳುತ್ತಿರುವುದು ಅತ್ಯಂತ ಸ್ಪಷ್ಟವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಹಿಂದೂ ದೇವಾಲಯಗಳ ಬಳಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ; ಕಾನೂನು ಏನು ಹೇಳುತ್ತದೆ?

“ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ/ಪ್ರಜಾಪ್ರಭುತ್ವದ ಕಾವಲುಗಾರ ಎಂದು ಹೇಳುತ್ತಾರೆ. ಆದರೆ ಇವರು ಕಾಂಗ್ರೆಸ್ ನವರನ್ನು ಕೇಳುವ ಪ್ರಶ್ನೆಗಳನ್ನು ಗಮನಿಸಿದರೆ ಇವರು ಮಾಧ್ಯಮ ಕಚೇರಿಗಳಿಂದ ಬರುತ್ತಾರೋ ಇಲ್ಲವೇ ಬಿಜೆಪಿ ಕಚೇರಿಯಿಂದ ಬರುತ್ತಾರೋ ಎಂದು ಗೊಂದಲವಾಗುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

“2018ರ ಸಂದರ್ಭದಲ್ಲಿ ಉತ್ತಮ ಆಡಳಿತಕ್ಕೆ ವಿರುದ್ಧವಾಗಿ ಧರ್ಮದ ಹೆಸರಲ್ಲಿ ದೊಡ್ಡ ಮಟ್ಟದ ಅಪ ಪ್ರಚಾರ ನಡೆಸುವಾಗಲೂ ಅವರಿಗೆ ಯಾವುದೇ ರೀತಿಯಲ್ಲಿ ಅಡೆ ತಡೆ ಉಂಟು ಮಾಡದೇ ಮಾಧ್ಯಮ ಸ್ವಾತಂತ್ರ್ಯ ಗೌರವಿಸಲಾಗಿತ್ತು. ಒಂದು ವೇಳೆ ನಮಗೆ ಮಾಡಿದಂತೆ ಈಗಿ‌ನ ಬಿಜೆಪಿಯ ಸರ್ವಾಧಿಕಾರಿ ಮನಸ್ಥಿತಿಯ ಪರಿಸ್ಥಿತಿಯಲ್ಲಿ ಮಾಧ್ಯಮಗಳು ಅವರ ವಿರುದ್ಧ ದನಿ ಎತ್ತಿದರೆ ಮಾಧ್ಯಮಗಳಿಗೆ ಉಳಿಗಾಲ ಉಂಟೇ?” ಎಂದು ಪ್ರಶ್ನಿಸಿದ್ದಾರೆ.

ಇದೇ ರೀತಿಯ ಹಲವಾರು ಬರಹಗಳು, ಕಟು ಟೀಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಾಧ್ಯಮಗಳು ವಿರೋಧ ಪಕ್ಷದ ವಿರೋಧ ಪಕ್ಷಗಳಂತೆ ವರ್ತಿಸುತ್ತಿರುವುದನ್ನು ಜನರು ಗುರುತಿಸುತ್ತಿದ್ದಾರೆ.


ಇದನ್ನೂ ಓದಿರಿ: ಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...