Homeಕರ್ನಾಟಕಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

- Advertisement -
- Advertisement -

“ಜೈನ ಧರ್ಮದವರು, ಕೆಲವು ಹಿಂದೂ ಮಹಿಳೆಯರು ತಲೆ ಮೇಲೆ ಸೆರಗು ಹಾಕಲ್ವಾ, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಸಾಕಲ್ವಾ, ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪ್ಪಟ ಹಾಕಿಕೊಂಡರೆ ನಿಮಗೇನು ತೊಂದರೆ. ಈ ವಿವಾದವನ್ನು ಸೃಷ್ಟಿಸಿದ್ದೇ ಬಿಜೆಪಿ. ಎರಡು ಧರ್ಮದವರನ್ನು ಕರೆದು ಬಗೆಹರಿಸಬಹುದಿತ್ತಲ್ಲ” ಎಂದು ಹೇಳುವ ಮೂಲಕ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ವಿವಾದ ಸೃಷ್ಟಿಸಿದ್ದಾರೆಂದು ಬಿಂಬಿಸಲಾಗುತ್ತಿದೆ.

‘ಹಿಜಾಬ್ ಸಮರ್ಥಿಸುವ ಭರದಲ್ಲಿ ಸಿದ್ದರಾಯ್ಯ ಲೂಸ್ ಟಾಕ್‌’ ಎಂದು ಮಾಧ್ಯಮಗಳು ಬಿಂಬಿಸಿ, ಸಿದ್ದರಾಮಯ್ಯನವರ ವಿರುದ್ಧ ಜನರನ್ನು ಎತ್ತಿಕಟ್ಟಲು ಯತ್ನಿಸುತ್ತಿರುವುದನ್ನು ಪ್ರಜ್ಞಾವಂತ ನಾಗರಿಕರು ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರಶ್ನೆ ಎತ್ತಿರುವ ಪತ್ರಕರ್ತ ಆದಿತ್ಯ ಭಾರದ್ವಾಜ್‌, “ಸಿದ್ಧರಾಮಯ್ಯನವರೇನೋ ಆಡಬಾರದ ಮಾತಾಡಿದ್ದಾರೆ ಎಂಬಂತೆ ನಮ್ಮ ಮಾಧ್ಯಮಗಳು, ಬಿಜೆಪಿ ಮತ್ತು ಸ್ವತಃ ಕಾಂಗ್ರೆಸ್ ಆಡುತ್ತಿದೆ. ಈ ಪಾಟಿ ಹಿಂದುತ್ವವನ್ನು ಒಪ್ಪಿಯೇ ರಾಜಕಾರಣ ಮಾಡುವುದಾದರೆ ಬಿಜೆಪಿಗೂ ಕಾಂಗ್ರೆಸ್ಸಿಗೂ ಫರಕ್ಕೇನು?” ಎಂದು ಕೇಳಿದ್ದಾರೆ.

ಮುಂದುವರಿದು, “ಜಗತ್ತಿನ ಎಲ್ಲ ಸಂಸ್ಕೃತಿಗಳಲ್ಲಿ ತಲೆ ಮೇಲೆ ಬಟ್ಟೆ ಹೊದೆಯುವ ಆಚಾರ, ಪರಿಪಾಠ ಇದೆ. ಅದನ್ನೇ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಅವರು ಹೇಳಿದ್ದರಲ್ಲಿ ಸ್ವಾಮೀಜಿಗಳಿಗೆ ಅಪಮಾನಕರವಾದದ್ದೇನಿದೆ ಅಂತ ಎಷ್ಟೇ ತಲೆ ಕೆರೆದುಕೊಂಡರೂ ಹುಣ್ಣಾಯಿತೇ ಹೊರತು ಅರ್ಥವಾಗಲಿಲ್ಲ! ಈ ರಾಜ್ಯದಲ್ಲಿಂದು ಸ್ವಾಮೀಜಿಗಳ ಪ್ರಸ್ತಾಪವೇ ಮಾಡುವ ಹಾಗಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರು ಮಾತಾಡಿದ ಕೆಲವೇ ನಿಮಿಷಗಳಲ್ಲಿ ನಮ್ಮ ಟಿವಿ ವಾಹಿನಿಗಳು ರಣಹದ್ದುಗಳಂತೆ ಮುಗಿಬಿದ್ದವು, ಸಿದ್ದರಾಮಯ್ಯರಿಂದ ಹಿಂದೂಗಳಿಗೆ, ಸ್ವಾಮೀಜಿಗಳಿಗೆ ಅಪಮಾನ, ಹಿಜಾಬ್ ಬೆಂಕಿಗೆ ಸಿದ್ದರಾಮಯ್ಯರಿಂದ ಪೆಟ್ರೋಲ್, ತುಪ್ಪ ಅಂತ ಅರಚಾಡಿದವು. ನಿರೀಕ್ಷೆಯಂತೆ ಹಿಂದೂಗಳ ಪ್ರತಿನಿಧಿಯಾಗಿ ಪ್ರಮೋದ್ ಮುತಾಲಿಕ್ ಥರದವರನ್ನು ಕರೆಸಿ ರಾಡಿ ಎಬ್ಬಿಸಿದರು. As a Hindu I feel deeply insulted to be represented by Pramod Muthalik and the likes. ಬಿಜೆಪಿಯ ಸಮಸ್ತ ನಾಯಕರೂ ಹಿಂದೂಗಳಿಗೆ ಆದ ಅಪಮಾನ ಎಂದು ಹುಯಿಲೆಬ್ಬಿಸಿದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ದಿನದ ಹಿಂದೆ ಹುಟ್ಟೂರು ಸಿದ್ದರಾಮಯ್ಯನ ಹುಂಡಿ ಜಾತ್ರೆಯಲ್ಲಿ ಮೈಮರೆತು ವೀರಮಕ್ಕಳ ಕುಣಿತ ಆಡುತ್ತಿದ್ದ ಸಿದ್ದರಾಮಯ್ಯ ಹಿಂದೂ ವಿರೋಧಿ ಆಗಿಬಿಟ್ಟರು! ಇನ್ನು ಇತ್ತ ಬ್ರಾಹ್ಮಣ್ಯ, ಹಿಂದುತ್ವದ ಮಾಧ್ಯಮಗಳು, ಬಿಜೆಪಿ ಅವರ ಮೇಲೆ ಕ್ರೂರ ದಾಳಿ ನಡೆಸಿದರೆ ಕಾಂಗ್ರೆಸ್ಸು ಅವರನ್ನು ಏಕಾಕಿ ಮಾಡಿಬಿಡ್ತು. ಸಿದ್ದರಾಮಯ್ಯನವರು ನೀಡುತ್ತಿರುವ ಸ್ಪಷ್ಟೀಕರಣ, ಅವರ ಬಾಡಿ ಲಾಂಗ್ವೇಜ್ ನೋಡಿ ನಿಜಕ್ಕೂ ಅಯ್ಯೋ ಎನಿಸಿತು. ಎಲ್ಲಿಗೆ ಬಂತು ಕರ್ನಾಟಕ? ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಆದಿತ್ಯ ಭಾರದ್ವಾಜ್ ಅವರಂತೆಯೇ ಅನೇಕ ನಾಗರಿಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾಗರಾಜ್‌ ಮೂರ್ತಿಗೌಡ ಅವರು, “ಈ ಮಾಧ್ಯಮಗಳು ಕಳೆದ ಏಳು ವರ್ಷದಿಂದ ನಿರಂತರವಾಗಿ ಬಿಜೆಪಿ ಪರವಾಗಿ ಮತ್ತು ಸಿದ್ದರಾಮಯ್ಯರ ವಿರುದ್ದ ನಿರಂತರವಾಗಿ ಸುಳ್ಳುಗಳನ್ನು ಹೇಳುತ್ತಿವೆ. ಈ ಸುಳ್ಳುಗಳಿಂದ ಮಾಧ್ಯಮಗಳಿಗೆ ಹೊಟ್ಟೆ ತುಂಬಾ ಅನ್ನ ಸಿಗಬಹುದು ಆದ್ರೆ ಬಡ ಜನತೆಯ ಹೊಟ್ಟೆಗೆ ತಣ್ಣಿರು ಬಟ್ಟೆ ಅಷ್ಟೇ ಸಿಕ್ಕಿದೆ…” ಎಂದು ಟೀಕಿಸಿದ್ದಾರೆ.

“ಮಾಧ್ಯಮಗಳು ಮೊದಲಿನಿಂದಲೂ ಇವರು ವಿರುದ್ಧ ನಿರಂತರವಾಗಿ ಸುಳ್ಳುಗಳನ್ನ ಹೇಳಿ ಅಪಪ್ರಚಾರ ಮಾಡುತ್ತಿವೆ ಇದೇನು ಹೊಸತಲ್ಲ ಮುಂದೇಯೂ ಮಾಡುತ್ತವೆ ಆದ್ರೆ ಜನರು ಮಾಧ್ಯಮಗಳನ್ನು Boycott ಮಾಡಬೇಕು ಅಷ್ಟೇ” ಎಂದು ಅಭಿಪ್ರಾಯಪಟ್ಟಿದ್ದಾರೆ.

ರವಿಕುಮಾರ್‌ ನರಭೋಳಿ ಅವರು, “ವಿಷಯ ಇಷ್ಟೊಂದು ಗಂಭೀರತೆ ಪಡೆದುಕೊಳ್ಳುತ್ತಿರುವುದೇ ಕೆಲ ಮಾಧ್ಯಮದ ಅತಿರಂಜಕತೆಯ ವರದಿಗಳಿಂದಾಗಿ. ಟಿವಿಗಳಲ್ಲಿ ಹದಿನೈದು‌ ದಿನ ಸುದ್ದಿ ಪ್ರಸಾರವಾಗದೇ ಇದ್ದರೆ ವಾತಾವರಣ ತಾನಾಗೆ ತಿಳಿಯಾಗುತ್ತದೆ” ಎಂದಿದ್ದಾರೆ.

“ಒಬ್ಬ ಜನಪರ ಇರುವ ನಾಯಕನನ್ನ ಹೇಗೆಲ್ಲ ಅವಮಾನಿಸಿ ಅಪಪ್ರಚಾರ ಮಾಡಿ ಸೋಲಿಸಬಹುದು. ಅಷ್ಟನ್ನು ಕಳೆದ ಚುನಾವಣೆಯಲ್ಲಿ ಮಾಡಿವೆ. ಇದರಿಂದ ಸಿದ್ದರಾಮಯ್ಯರವರಿಗೆ ಒಂದು ಚೂರು ಅನ್ಯಾಯ ಆಗಿಲ್ಲ. ಅನ್ಯಾಯ ಆಗಿರೋದು ಈ ರಾಜ್ಯದ ಬಡವರಿಗೆ, ನಿರ್ಗತಿಕರಿಗೆ, ಧೀನ ದಲಿತರಿಗೆ ಮತ್ತು ರಾಜ್ಯದ ಒಟ್ಟಾರೆ ಬಡವರಿಗೆ. ರಾಜ್ಯ ಅಭಿವೃದ್ಧಿ ಬಗ್ಗೆ ಈ ಮಾಧ್ಯಮಗಳು ಒಂದು ದಿನಾನು ಚರ್ಚೆ ಮಾಡ್ತಿಲ್ಲ. ದಿನ ಬೆಳಾಗದರೆ ಹಿಜಾಬ್, ಧರ್ಮ, ಮಂದಿರ, ಮಸೀದಿ, ಚರ್ಚ್, ಮುಸ್ಲಿಂ, ಮಠ, ಮಠಾಧೀಶರ ಬಗ್ಗೆ ಚರ್ಚೆ ಮಾಡಿ ಜನರನ್ನ ದಿಕ್ಕು ತಪ್ಪಿಸಿ ರಾಜ್ಯ ಮತ್ತು ದೇಶವನ್ನ ಹಾಳು ಮಾಡುತ್ತಿವೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತ ಶಶಿಧರ್‌ ಭಟ್‌ ಅವರು, “ಮಠಾಧಿಪತಿಗಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದು ತಪ್ಪೆ? ಮುಸ್ಲಿಮರು ಕಪ್ಪು ಬಟ್ಟೆ ಹಿಜಾಬ್‌ಗೆ ಬಳಸಿದರೆ ಹಿಂದೂಗಳು ಕೇಸರಿ ಬಳಸುತ್ತಾರೆ ಎರಡೂ ಒಂದೇ ಅಲ್ಲವೆ? ಬಿಜೆಪಿ ಮಾಧ್ಯಮಗಳ ಪ್ರಕಾರ ಇದು ಘೋರ ಅಪರಾಧ! ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿ ಬಿದ್ದ ಗೋದಿ ಮೀಡಿಯಾ.. ಬಿಜೆಪಿ ನಾಯಕರು ಕೆಲವು ಋಷಿಕುಮಾರ್ ಸ್ವಾಮಿಯಂತಹ ಸ್ವಾಮೀಜಿಗಳು” ಎಂಬ ಅಂಶಗಳನ್ನು ಒಳಗೊಂಡು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಯುವ ಕಾಂಗ್ರೆಸ್ ಮುಖಂಡ ಸುನಿಲ್‌ ಬೋಸ್‌ ಈ ಕುರಿತು ವಿಸ್ತೃತವಾಗಿ ಬರೆದಿದ್ದಾರೆ. “ಸಿದ್ದರಾಮಯ್ಯನವರ ವಿಷಯದಲ್ಲಿ ಕೆಲವೊಂದು ಮಾಧ್ಯಮಗಳಿಗೆ ಸಮೂಹ ಸನ್ನಿ ಹಿಡಿದಿದೆ. ನಾನು ಸೂಕ್ಷ್ಮವಾಗಿ ಗ್ರಹಿಸಿದಂತೆ ಮಾಧ್ಯಮಗಳು ಬೆಲೆ ಏರಿಕೆ, ಲಾಕ್ ಡೌನ್ ಸಂಕಷ್ಟಗಳು ಇತ್ಯಾದಿಗಳಿಂದ ಜನ ಸಾಮಾನ್ಯರಿಗೆ ಸರ್ಕಾರದ ದುರಾಡಳಿತದಿಂದ ಆಗುತ್ತಿರುವ ತೊಂದರೆಗಳನ್ನು ಪ್ರಶ್ನಿಸದೇ ಸೀದಾ ಸಿದ್ದರಾಮಯ್ಯ ಅವರ ಬಳಿಗೆ ಬಂದು ತಮಗೆ ಬೇಕಾದ ಪ್ರಶ್ನೆಗಳನ್ನು ಕೇಳಿ, ಅದಕ್ಕೆ ಸಿದ್ದರಾಮಯ್ಯ ಅವರಿಂದ ಬರುವ ಉತ್ತರವನ್ನು ಅವರಿಗೆ ಬೇಕಾದಂತೆ ಬಳಸಿಕೊಳ್ಳುತ್ತಿರುವುದು ಅತ್ಯಂತ ಸ್ಪಷ್ಟವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಹಿಂದೂ ದೇವಾಲಯಗಳ ಬಳಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ; ಕಾನೂನು ಏನು ಹೇಳುತ್ತದೆ?

“ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ/ಪ್ರಜಾಪ್ರಭುತ್ವದ ಕಾವಲುಗಾರ ಎಂದು ಹೇಳುತ್ತಾರೆ. ಆದರೆ ಇವರು ಕಾಂಗ್ರೆಸ್ ನವರನ್ನು ಕೇಳುವ ಪ್ರಶ್ನೆಗಳನ್ನು ಗಮನಿಸಿದರೆ ಇವರು ಮಾಧ್ಯಮ ಕಚೇರಿಗಳಿಂದ ಬರುತ್ತಾರೋ ಇಲ್ಲವೇ ಬಿಜೆಪಿ ಕಚೇರಿಯಿಂದ ಬರುತ್ತಾರೋ ಎಂದು ಗೊಂದಲವಾಗುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

“2018ರ ಸಂದರ್ಭದಲ್ಲಿ ಉತ್ತಮ ಆಡಳಿತಕ್ಕೆ ವಿರುದ್ಧವಾಗಿ ಧರ್ಮದ ಹೆಸರಲ್ಲಿ ದೊಡ್ಡ ಮಟ್ಟದ ಅಪ ಪ್ರಚಾರ ನಡೆಸುವಾಗಲೂ ಅವರಿಗೆ ಯಾವುದೇ ರೀತಿಯಲ್ಲಿ ಅಡೆ ತಡೆ ಉಂಟು ಮಾಡದೇ ಮಾಧ್ಯಮ ಸ್ವಾತಂತ್ರ್ಯ ಗೌರವಿಸಲಾಗಿತ್ತು. ಒಂದು ವೇಳೆ ನಮಗೆ ಮಾಡಿದಂತೆ ಈಗಿ‌ನ ಬಿಜೆಪಿಯ ಸರ್ವಾಧಿಕಾರಿ ಮನಸ್ಥಿತಿಯ ಪರಿಸ್ಥಿತಿಯಲ್ಲಿ ಮಾಧ್ಯಮಗಳು ಅವರ ವಿರುದ್ಧ ದನಿ ಎತ್ತಿದರೆ ಮಾಧ್ಯಮಗಳಿಗೆ ಉಳಿಗಾಲ ಉಂಟೇ?” ಎಂದು ಪ್ರಶ್ನಿಸಿದ್ದಾರೆ.

ಇದೇ ರೀತಿಯ ಹಲವಾರು ಬರಹಗಳು, ಕಟು ಟೀಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಾಧ್ಯಮಗಳು ವಿರೋಧ ಪಕ್ಷದ ವಿರೋಧ ಪಕ್ಷಗಳಂತೆ ವರ್ತಿಸುತ್ತಿರುವುದನ್ನು ಜನರು ಗುರುತಿಸುತ್ತಿದ್ದಾರೆ.


ಇದನ್ನೂ ಓದಿರಿ: ಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...