Homeಮುಖಪುಟ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ'

‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

- Advertisement -
- Advertisement -

ಉಭಯ ಸದನಗಳಿಂದ ಅಮಾನತಾಗಿದ್ದ ಸಂಸದರು ಸಂಸತ್ತಿನ ಹೊರಗೆ ಕುಳಿತಿರುವುದನ್ನು ನಾನು ವಿಡಿಯೋ ರೆಕಾರ್ಡ್ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿ ಮಾತನಾಡುತ್ತಿವೆ. ಅವರು ನಿರುದ್ಯೋಗದ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಸರ್ಕಾರದ ವಿರುದ್ಧ ‘ಇಂಡಿಯಾ’ ಒಕ್ಕೂಟಗಳ ನಾಯಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸದರ ಅಮಾನತು ವಿಚಾರದಲ್ಲಿ ‘ಮಾಧ್ಯಮಗಳ ಪಕ್ಷಪಾತ’ದ ವಿರುದ್ಧ ಆಕ್ರೋಶ ಹೊರಹಾಕಿದರು.

‘ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಮಾಧ್ಯಮಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡಲಿಲ್ಲ. ಮೂರ್ನಾಲ್ಕು ಯುವಕರು ಹೊಗೆ ಡಬ್ಬಿಯೊಂದಿಗೆ ಸಂಸತ್ತಿಗೆ ಪ್ರವೇಶಿಸಿದಾಗ ಬಿಜೆಪಿ ಸಂಸದರು ಹೇಗೆ ಹೆದರಿ ಓಡಿಹೋದರು ಎಂಬುದನ್ನು ನಾವು ನೋಡಿದ್ದೇವೆ. ಇದು ಖಂಡಿತವಾಗಿಯೂ ಭದ್ರತಾ ಉಲ್ಲಂಘನೆಯ ಪ್ರಶ್ನೆಯಾಗಿದೆ. ಆದರೆ, ನಿರುದ್ಯೋಗವೆ ಪ್ರತಿಭಟನೆಯ ಹಿಂದಿನ ಪ್ರಮುಖ ಕಾರಣವಾಗಿದೆ’ ಎಂದು ಹೇಳಿದರು.

‘ಮಾಧ್ಯಮಗಳು ದೇಶದ ನಿರುದ್ಯೋಗದ ಬಗ್ಗೆ ಮಾತನಾಡಲಿಲ್ಲ. ಬದಲಿಗೆ, ರಾಹುಲ್ ಗಾಂಧಿ ಸಂಸತ್ತಿನ ಹೊರಗೆ ಕುಳಿತಿರುವ ಸಂಸದರ ವೀಡಿಯೋಗಳನ್ನು ರೆಕಾರ್ಡ್ ಮಾಡುವ ಬಗ್ಗೆ ಮಾತನಾಡಲು ಪ್ರಾರಂಭಿಸಿದವು. ಸದನದಲ್ಲಿ ಭದ್ರತಾ ಲೋಪದ ಬಗ್ಗೆ ಮಾಧ್ಯಮಗಳು ಅಮಿತ್ ಶಾ ಅವರನ್ನು ಪ್ರಶ್ನಿಸಲಿಲ್ಲ ಯಾಕೆ’ ಎಂದು ಹೇಳಿದರು.

‘ಉಲ್ಲಂಘನೆಯು ಸಂಸತ್ತಿನ ಭದ್ರತೆಯ ಗಂಭಿರ ಪ್ರಶ್ನೆಯಾಗಿದೆ, ಇನ್ನೊಂದು ಮುಖ್ಯವಾದ ಪ್ರಶ್ನೆ ಇದೆ. ಆ ಯುವಕರು ಇಂತಹ ಪ್ರತಿಭಟನೆಗೆ ಮುಂದಾಗಿದ್ದು ಏಕೆ? ಕಾರಣ ನಿರುದ್ಯೋಗ… ದೇಶದಲ್ಲಿ ಭಯಾನಕ ನಿರುದ್ಯೋಗವಿದೆ.  ಯುವಕರು ಉದ್ಯೋಗ ಪಡೆಯಲು ಸಾಧ್ಯವಿಲ್ಲ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಹೆಚ್ಚಿನ ಮಟ್ಟದ ನಿರುದ್ಯೋಗವು ಭಾರತದ ಯುವಜನರಲ್ಲಿ ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್ ಚಟಕ್ಕೆ ಕಾರಣವಾಗಿದೆ. ನಾನು ಇತ್ತೀಚೆಗೆ ಒಂದು ಸಣ್ಣ ಸಮೀಕ್ಷೆಯನ್ನು ಮಾಡಿದ್ದೇನೆ… ಭಾರತೀಯ ಯುವಕರು ಸರಾಸರಿ ಒಂದೂವರೆಯಿಂದ ಏಳು ಗಂಟೆಗಳ ಕಾಲ ಇನ್ಸ್‌ಟಾಗ್ರಾಮ್, ಫೇಸ್‌ಬುಕ್, ಟ್ವಿಟ್ಟರ್‌ನಲ್ಲಿ ಕಳೆಯುತ್ತಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಒಬ್ಬ ಭಾರತೀಯ ಯುವಕ ತನ್ನ ಸೆಲ್ ಫೋನ್‌ನಲ್ಲಿ ದಿನಕ್ಕೆ ಏಳೂವರೆ ಗಂಟೆಗಳ ಕಾಲ ಕಳೆಯುತ್ತಿದ್ದಾನೆ. ಏಕೆಂದರೆ ನರೇಂದ್ರ ಮೋದಿ ಅವರು ಭಾರತದ ಯುವಕರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲರಾಗಿದ್ದಾರೆ’ ಎಂದು ರಾಹುಲ್ ಹೇಳಿದರು.

ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಸದನದಲ್ಲಿ ಅಮಿತ್ ಶಾ ಪ್ರತಿಕ್ರಿಯೆ ಕೇಳಿದ ನಂತರ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಇಂಡಿಯಾ ಬಣದ ಪಕ್ಷಗಳ ನಾಯಕರು ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸಿದರು.

ಇದನ್ನೂ ಓದಿ; ದೆಹಲಿ: ಸಂಸದರ ಅಮಾನತು ಖಂಡಿಸಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...