Homeಮುಖಪುಟ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ'

‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

- Advertisement -
- Advertisement -

ಉಭಯ ಸದನಗಳಿಂದ ಅಮಾನತಾಗಿದ್ದ ಸಂಸದರು ಸಂಸತ್ತಿನ ಹೊರಗೆ ಕುಳಿತಿರುವುದನ್ನು ನಾನು ವಿಡಿಯೋ ರೆಕಾರ್ಡ್ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿ ಮಾತನಾಡುತ್ತಿವೆ. ಅವರು ನಿರುದ್ಯೋಗದ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಸರ್ಕಾರದ ವಿರುದ್ಧ ‘ಇಂಡಿಯಾ’ ಒಕ್ಕೂಟಗಳ ನಾಯಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸದರ ಅಮಾನತು ವಿಚಾರದಲ್ಲಿ ‘ಮಾಧ್ಯಮಗಳ ಪಕ್ಷಪಾತ’ದ ವಿರುದ್ಧ ಆಕ್ರೋಶ ಹೊರಹಾಕಿದರು.

‘ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಮಾಧ್ಯಮಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡಲಿಲ್ಲ. ಮೂರ್ನಾಲ್ಕು ಯುವಕರು ಹೊಗೆ ಡಬ್ಬಿಯೊಂದಿಗೆ ಸಂಸತ್ತಿಗೆ ಪ್ರವೇಶಿಸಿದಾಗ ಬಿಜೆಪಿ ಸಂಸದರು ಹೇಗೆ ಹೆದರಿ ಓಡಿಹೋದರು ಎಂಬುದನ್ನು ನಾವು ನೋಡಿದ್ದೇವೆ. ಇದು ಖಂಡಿತವಾಗಿಯೂ ಭದ್ರತಾ ಉಲ್ಲಂಘನೆಯ ಪ್ರಶ್ನೆಯಾಗಿದೆ. ಆದರೆ, ನಿರುದ್ಯೋಗವೆ ಪ್ರತಿಭಟನೆಯ ಹಿಂದಿನ ಪ್ರಮುಖ ಕಾರಣವಾಗಿದೆ’ ಎಂದು ಹೇಳಿದರು.

‘ಮಾಧ್ಯಮಗಳು ದೇಶದ ನಿರುದ್ಯೋಗದ ಬಗ್ಗೆ ಮಾತನಾಡಲಿಲ್ಲ. ಬದಲಿಗೆ, ರಾಹುಲ್ ಗಾಂಧಿ ಸಂಸತ್ತಿನ ಹೊರಗೆ ಕುಳಿತಿರುವ ಸಂಸದರ ವೀಡಿಯೋಗಳನ್ನು ರೆಕಾರ್ಡ್ ಮಾಡುವ ಬಗ್ಗೆ ಮಾತನಾಡಲು ಪ್ರಾರಂಭಿಸಿದವು. ಸದನದಲ್ಲಿ ಭದ್ರತಾ ಲೋಪದ ಬಗ್ಗೆ ಮಾಧ್ಯಮಗಳು ಅಮಿತ್ ಶಾ ಅವರನ್ನು ಪ್ರಶ್ನಿಸಲಿಲ್ಲ ಯಾಕೆ’ ಎಂದು ಹೇಳಿದರು.

‘ಉಲ್ಲಂಘನೆಯು ಸಂಸತ್ತಿನ ಭದ್ರತೆಯ ಗಂಭಿರ ಪ್ರಶ್ನೆಯಾಗಿದೆ, ಇನ್ನೊಂದು ಮುಖ್ಯವಾದ ಪ್ರಶ್ನೆ ಇದೆ. ಆ ಯುವಕರು ಇಂತಹ ಪ್ರತಿಭಟನೆಗೆ ಮುಂದಾಗಿದ್ದು ಏಕೆ? ಕಾರಣ ನಿರುದ್ಯೋಗ… ದೇಶದಲ್ಲಿ ಭಯಾನಕ ನಿರುದ್ಯೋಗವಿದೆ.  ಯುವಕರು ಉದ್ಯೋಗ ಪಡೆಯಲು ಸಾಧ್ಯವಿಲ್ಲ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಹೆಚ್ಚಿನ ಮಟ್ಟದ ನಿರುದ್ಯೋಗವು ಭಾರತದ ಯುವಜನರಲ್ಲಿ ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್ ಚಟಕ್ಕೆ ಕಾರಣವಾಗಿದೆ. ನಾನು ಇತ್ತೀಚೆಗೆ ಒಂದು ಸಣ್ಣ ಸಮೀಕ್ಷೆಯನ್ನು ಮಾಡಿದ್ದೇನೆ… ಭಾರತೀಯ ಯುವಕರು ಸರಾಸರಿ ಒಂದೂವರೆಯಿಂದ ಏಳು ಗಂಟೆಗಳ ಕಾಲ ಇನ್ಸ್‌ಟಾಗ್ರಾಮ್, ಫೇಸ್‌ಬುಕ್, ಟ್ವಿಟ್ಟರ್‌ನಲ್ಲಿ ಕಳೆಯುತ್ತಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಒಬ್ಬ ಭಾರತೀಯ ಯುವಕ ತನ್ನ ಸೆಲ್ ಫೋನ್‌ನಲ್ಲಿ ದಿನಕ್ಕೆ ಏಳೂವರೆ ಗಂಟೆಗಳ ಕಾಲ ಕಳೆಯುತ್ತಿದ್ದಾನೆ. ಏಕೆಂದರೆ ನರೇಂದ್ರ ಮೋದಿ ಅವರು ಭಾರತದ ಯುವಕರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲರಾಗಿದ್ದಾರೆ’ ಎಂದು ರಾಹುಲ್ ಹೇಳಿದರು.

ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಸದನದಲ್ಲಿ ಅಮಿತ್ ಶಾ ಪ್ರತಿಕ್ರಿಯೆ ಕೇಳಿದ ನಂತರ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಇಂಡಿಯಾ ಬಣದ ಪಕ್ಷಗಳ ನಾಯಕರು ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸಿದರು.

ಇದನ್ನೂ ಓದಿ; ದೆಹಲಿ: ಸಂಸದರ ಅಮಾನತು ಖಂಡಿಸಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...