Homeಮುಖಪುಟಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ

ಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ

- Advertisement -
- Advertisement -

ಕೋಮು ಸೌಹಾರ್ದತೆ ಕೆಡಿಸುವ ಯಾವುದೇ ವಿಷಯಗಳಲ್ಲಿ ಪಾಲ್ಗೊಳ್ಳದಂತೆ ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ರಾಜ್ಯದ ಎಲ್ಲಾ ವೈದ್ಯರಿಗೆ ಎಚ್ಚರಿಕೆ ನೀಡಿದೆ. ಸುತ್ತೋಲೆಯನ್ನು ಏಪ್ರಿಲ್ 26 ರಂದು ಕೌನ್ಸಿಲ್‌ನ ರಿಜಿಸ್ಟ್ರಾರ್ ಆಗಿರುವ ಡಾ. ಶ್ಯಾಮರಾವ್‌ ಬಿ. ಪಾಟಿಲ್‌ ಹೊರಡಿಸಿದ್ದಾರೆ.

ಸುತ್ತೋಲೆಯು, “ರಾಜ್ಯದ ವೈದ್ಯರು ಕೋಮು ಸೌಹಾರ್ದತೆ ಕೆಡಿಸುವ ವಿಚಾರಗಳಲ್ಲಿ ಭಾಗವಹಿಸುತ್ತಿರುವುದು ಕಂಡು ಬಂದರೆ ಅವರ ವಿರುದ್ಧವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಸೌಹಾರ್ದತೆ ಕೆಡಿಸುತ್ತಾ ಅದನ್ನು ಹರಡುವಲ್ಲಿ ವೈದ್ಯರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಕರ್ನಾಟಕ ವೈದ್ಯಕೀಯ ಮಂಡಳಿಯ ಗಮನಕ್ಕೆ ತರಲಾಗಿದೆ. ವೈದ್ಯರು ರೋಗಿಯನ್ನು ಜಾತಿ ಧರ್ಮವನ್ನು ಲೆಕ್ಕಿಸದೆ ಚಿಕಿತ್ಸೆ ನೀಡಬೇಕಾಗಿದೆ. ಈ ಕಾರಣಕ್ಕಾಗಿ ಕೋಮು ಸೌಹಾರ್ದತೆ ಕೆಡಿಸುವ ವಿಷಯಗಳಲ್ಲಿ ವೈದ್ಯರ ಭಾಗವಹಿಸುವುದು ವೃತ್ತಿಪರ ದುರ್ನಡತೆಯಾಗಿದೆ” ಎಂದು ಸುತ್ತೋಲೆ ಹೇಳಿದೆ.

ಇದನ್ನೂ ಓದಿ: ಕೋಮುದ್ವೇಷ ತಡೆಗೆ ಆಗ್ರಹಿಸಿ 13 ವಿಪಕ್ಷಗಳ ನಾಯಕರಿಂದ ಜಂಟಿ ಪತ್ರಿಕಾ ಹೇಳಿಕೆ

ವೈದ್ಯಕೀಯ ನೈತಿಕತೆ ಅಥವಾ ವೃತ್ತಿಪರ ನಡವಳಿಕೆಯ ಉಲ್ಲಂಘನೆಯ ಒಂದು ಸಣ್ಣ ಅವಕಾಶವೂ ಇರಬಾರದು ಎಂಬ ರೀತಿಯಲ್ಲಿ ವೈದ್ಯರು ಕೆಲಸ ಮಾಡಬೇಕೆಂದು ಸುತ್ತೋಲೆ ಒತ್ತಿ ಹೇಳಿದೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೃತ್ತಿನಿರತ ವೈದ್ಯರು ಕ್ರಿಮಿನಲ್‌ ಕೃತ್ಯಗಳಂತಹ ಯಾವುದೆ ಘಟನೆಗಳಲ್ಲಿ ಭಾಗಿವಾಗಿರಬಾರದು. ವೈದ್ಯಕೀಯ ನೀತಿ ಅಥವಾ ವೃತ್ತಿಯ ಉಲ್ಲಂಘನೆಯ ಬಗ್ಗೆ ಮಂಡಳಿಯ ಗಮನಕ್ಕೆ ಬಂದರೆ ಅಂತಹ ವೈದ್ಯರೊಂದಿಗೆ ಕಾನೂನಿನ ಪ್ರಕಾರ ವ್ಯವಹರಿಸಲಾಗುವುದು ಎಂದು ಸುತ್ತೋಲೆ ಹೇಳಿದೆ.

ಸುತ್ತೋಲೆಯನ್ನು ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳ ನಿರ್ದೇಶಕರು, ಪ್ರಾಂಶುಪಾಲರು, ಡೀನ್‌‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೃತ್ತಿಪರ ವೈದ್ಯರಿಗೆ ಪ್ರಸಾರ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...