Homeಮುಖಪುಟಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ

ಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ

- Advertisement -
- Advertisement -

ಕೋಮು ಸೌಹಾರ್ದತೆ ಕೆಡಿಸುವ ಯಾವುದೇ ವಿಷಯಗಳಲ್ಲಿ ಪಾಲ್ಗೊಳ್ಳದಂತೆ ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ರಾಜ್ಯದ ಎಲ್ಲಾ ವೈದ್ಯರಿಗೆ ಎಚ್ಚರಿಕೆ ನೀಡಿದೆ. ಸುತ್ತೋಲೆಯನ್ನು ಏಪ್ರಿಲ್ 26 ರಂದು ಕೌನ್ಸಿಲ್‌ನ ರಿಜಿಸ್ಟ್ರಾರ್ ಆಗಿರುವ ಡಾ. ಶ್ಯಾಮರಾವ್‌ ಬಿ. ಪಾಟಿಲ್‌ ಹೊರಡಿಸಿದ್ದಾರೆ.

ಸುತ್ತೋಲೆಯು, “ರಾಜ್ಯದ ವೈದ್ಯರು ಕೋಮು ಸೌಹಾರ್ದತೆ ಕೆಡಿಸುವ ವಿಚಾರಗಳಲ್ಲಿ ಭಾಗವಹಿಸುತ್ತಿರುವುದು ಕಂಡು ಬಂದರೆ ಅವರ ವಿರುದ್ಧವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಸೌಹಾರ್ದತೆ ಕೆಡಿಸುತ್ತಾ ಅದನ್ನು ಹರಡುವಲ್ಲಿ ವೈದ್ಯರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಕರ್ನಾಟಕ ವೈದ್ಯಕೀಯ ಮಂಡಳಿಯ ಗಮನಕ್ಕೆ ತರಲಾಗಿದೆ. ವೈದ್ಯರು ರೋಗಿಯನ್ನು ಜಾತಿ ಧರ್ಮವನ್ನು ಲೆಕ್ಕಿಸದೆ ಚಿಕಿತ್ಸೆ ನೀಡಬೇಕಾಗಿದೆ. ಈ ಕಾರಣಕ್ಕಾಗಿ ಕೋಮು ಸೌಹಾರ್ದತೆ ಕೆಡಿಸುವ ವಿಷಯಗಳಲ್ಲಿ ವೈದ್ಯರ ಭಾಗವಹಿಸುವುದು ವೃತ್ತಿಪರ ದುರ್ನಡತೆಯಾಗಿದೆ” ಎಂದು ಸುತ್ತೋಲೆ ಹೇಳಿದೆ.

ಇದನ್ನೂ ಓದಿ: ಕೋಮುದ್ವೇಷ ತಡೆಗೆ ಆಗ್ರಹಿಸಿ 13 ವಿಪಕ್ಷಗಳ ನಾಯಕರಿಂದ ಜಂಟಿ ಪತ್ರಿಕಾ ಹೇಳಿಕೆ

ವೈದ್ಯಕೀಯ ನೈತಿಕತೆ ಅಥವಾ ವೃತ್ತಿಪರ ನಡವಳಿಕೆಯ ಉಲ್ಲಂಘನೆಯ ಒಂದು ಸಣ್ಣ ಅವಕಾಶವೂ ಇರಬಾರದು ಎಂಬ ರೀತಿಯಲ್ಲಿ ವೈದ್ಯರು ಕೆಲಸ ಮಾಡಬೇಕೆಂದು ಸುತ್ತೋಲೆ ಒತ್ತಿ ಹೇಳಿದೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೃತ್ತಿನಿರತ ವೈದ್ಯರು ಕ್ರಿಮಿನಲ್‌ ಕೃತ್ಯಗಳಂತಹ ಯಾವುದೆ ಘಟನೆಗಳಲ್ಲಿ ಭಾಗಿವಾಗಿರಬಾರದು. ವೈದ್ಯಕೀಯ ನೀತಿ ಅಥವಾ ವೃತ್ತಿಯ ಉಲ್ಲಂಘನೆಯ ಬಗ್ಗೆ ಮಂಡಳಿಯ ಗಮನಕ್ಕೆ ಬಂದರೆ ಅಂತಹ ವೈದ್ಯರೊಂದಿಗೆ ಕಾನೂನಿನ ಪ್ರಕಾರ ವ್ಯವಹರಿಸಲಾಗುವುದು ಎಂದು ಸುತ್ತೋಲೆ ಹೇಳಿದೆ.

ಸುತ್ತೋಲೆಯನ್ನು ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳ ನಿರ್ದೇಶಕರು, ಪ್ರಾಂಶುಪಾಲರು, ಡೀನ್‌‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೃತ್ತಿಪರ ವೈದ್ಯರಿಗೆ ಪ್ರಸಾರ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....