Homeಕರ್ನಾಟಕವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ವೈದ್ಯಕೀಯ ಗರ್ಭಪಾತ (ಎಂಟಿಪಿ) ಕಾನೂನಿನ ಅಡಿಯಲ್ಲಿನ ಹಕ್ಕುಗಳ ಕುರಿತು ಮಹಿಳೆಯರಿಗೆ ಸಮಾಲೋಚನೆ ನೀಡುವ ಮೂಲಕ, ಸಂತ್ರಸ್ತರಿಗೆ ಮಾನಸಿಕ ಆಘಾತ ಕಡಿಮೆ ಮಾಡಲು ಹಾಗೂ ಅವರಿಗೆ ಸಹಾಯ ಮಾಡಲು ಕರ್ನಾಟಕ ಹೈಕೋರ್ಟ್ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ 17 ವರ್ಷದ ಬಾಲಕಿಗೆ ಎಂಟಿಪಿಗೆ ಒಳಗಾಗಲು ಅನುಮತಿ ನೀಡುವಾಗ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ನಿರ್ದೇಶನಗಳನ್ನು ನೀಡಿದ್ದಾರೆ. ಅಪ್ರಾಪ್ತ ವಯಸ್ಸಿನ ಗರ್ಭಾವಸ್ಥೆಯ ಹಲವಾರು ಪ್ರಕರಣಗಳು ಲೈಂಗಿಕ ಅಪರಾಧಗಳಿಂದ ಸಂಭವಿಸಿದ್ದು, ಅದರ ಅನ್ವಯ ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಸಂತ್ರಸ್ತೆಯರು ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಬಯಸುವ ಹೆಚ್ಚಿನ ಪ್ರಕರಣಗಳಲ್ಲಿ ಗರ್ಭಾವಸ್ಥೆಯ ಅವಧಿಯು 24 ವಾರಗಳನ್ನು ದಾಟಿರುತ್ತದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಇದು ವೈದ್ಯಕೀಯ ಗರ್ಭಪಾತ (ತಿದ್ದುಪಡಿ)-1971ರ ಅಡಿಯಲ್ಲಿ ಅನುಮತಿ ನೀಡುವ ಅವಧಿಯಾಗಿದೆ. ನಂತರದ ಯಾವುದೇ ವಿಳಂಬಕ್ಕೆ ಹೈಕೋರ್ಟ್‌ನಿಂದ ಅನುಮತಿ ಪಡೆಯುವುದು ಅಗತ್ಯವಿದೆ.

ಐಪಿಸಿ ಸೆಕ್ಷನ್ 376 ಅಥವಾ ಪೋಕ್ಸೊ ಕಾಯ್ದೆಯಡಿ ಲೈಂಗಿಕ ಅಪರಾಧವನ್ನು ದಾಖಲಿಸಿದ ತಕ್ಷಣ, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಗರ್ಭಿಣಿಯಾಗಿದ್ದಲ್ಲಿ ಖಚಿತಪಡಿಸಿಕೊಳ್ಳಬೇಕೆಂದು ನ್ಯಾಯಾಲಯ ಹೇಳಿದೆ. ಗರ್ಭಾವಸ್ಥೆಯ ಅವಧಿಯನ್ನು ಖಚಿತಪಡಿಸಿದ ನಂತರ, ಅಧಿಕಾರಿಗಳು ಸಂತ್ರಸ್ತೆಯ ದೈಹಿಕ ಮತ್ತು ಮಾನಸಿಕ ಸ್ಥಿತಿ, ವೈದ್ಯಕೀಯ ಗರ್ಭಪಾತಕ್ಕೆ ಒಳಗಾಗುವ ಸಾಮರ್ಥ್ಯ, ಆಕೆಯ ಆರೋಗ್ಯ ಮತ್ತು ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮದ ಯಾವುದೇ ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯದ ಸಂತ್ರಸ್ತೆ ಗರ್ಭಿಣಿ ಎಂದು ಕಂಡುಬಂದಲ್ಲಿ, ಮಕ್ಕಳ ಕಲ್ಯಾಣ ಸಮಿತಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪ್ರಕರಣಕ್ಕೆ ಅನುಗುಣವಾಗಿ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಸಂತ್ರಸ್ತೆಯ ಗರ್ಭಾವಸ್ಥೆಯ ಮುಂದುವರಿಕೆ ಮತ್ತು ಅದರ ಪರಿಣಾಮಗಳು, ವೈದ್ಯಕೀಯ ಗರ್ಭಪಾತದ ಪ್ರಕ್ರಿಯೆಯಂತಹ ಕಾನೂನು ಆಯ್ಕೆಗಳ ಕುರಿತು ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರಿಗೆ ಸಲಹೆ ನೀಡುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

‘ಅಗತ್ಯವಿದ್ದದ್ದಲ್ಲಿ, ಸೂಕ್ತ ಅನುವಾದಕರನ್ನು ಬಳಸಿಕೊಂಡು ಸಂತ್ರಸ್ತರಿಗೆ ತಿಳಿದಿರುವ ಭಾಷೆಯಲ್ಲಿ ಸಮಾಲೋಚನೆ ನಡೆಸಬೇಕು. ಎಂಟಿಪಿಯನ್ನು ಕೈಗೊಳ್ಳುವ ಸಂದರ್ಭದಲ್ಲಿ, ಭ್ರೂಣದ ಅಂಗಾಂಶದ ಮಾದರಿಗಳನ್ನು ಡಿಎನ್ಎ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಪರಿಶೀಲನೆಗೆ ಅಗತ್ಯವಿದ್ದರೆ ಹೆಚ್ಚುವರಿ ಮಾದರಿಗಳನ್ನು ಸಂರಕ್ಷಿಸಿಡಬೇಕು. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಸಮಾಲೋಚಿಸಿ, ಡಿಜಿ ಮತ್ತು ಐಜಿಪಿ ಅವರು ಸೂಕ್ತವೆಂದು ಭಾವಿಸುವ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು (ಎಸ್ಒಪಿ) ಸಿದ್ಧಪಡಿಸಲು ಮತ್ತು ಅದನ್ನು ಎಲ್ಲ ತನಿಖಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಗೆ ತಲುಪಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಮಕ್ಕಳ ಸಂರಕ್ಷಣಾ ಘಟಕಗಳು, ಸರ್ಕಾರಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ತರಬೇತಿ ಲಭ್ಯವಾಗುವಂತೆ ಮಾಡಬೇಕು. ಪ್ರಸ್ತುತ ಈ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಮದುವೆಯಾಗುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ಗರ್ಭಾವಸ್ಥೆಯ ಅವಧಿ ಮುಗಿದ ಕಾರಣ, ನ್ಯಾಯಾಲಯವು ವೈದ್ಯಕೀಯ ಮಂಡಳಿಯನ್ನು ರಚಿಸಿತ್ತು. ವರದಿಯನ್ನು ಸ್ವೀಕರಿಸಿದ ನಂತರ, ಅಗತ್ಯವಿರುವ ಎಲ್ಲ ಸುರಕ್ಷತೆಗಳನ್ನು ತೆಗೆದುಕೊಳ್ಳುವ ಮೂಲಕ ಎಂಟಿಪಿಯನ್ನು ಕೈಗೊಳ್ಳುವಂತೆ ಸರ್ಕಾರಿ ಸ್ವಾಮ್ಯದ ವಾಣಿ ವಿಲಾಸ ಆಸ್ಪತ್ರೆಯ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ; ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...