Homeಕರ್ನಾಟಕತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು: ಡಾ. ಪ್ರಕಾಶ್ ಕಮ್ಮರಡಿ

ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು: ಡಾ. ಪ್ರಕಾಶ್ ಕಮ್ಮರಡಿ

’ಅವತ್ತಿನ ಕಾಲಕ್ಕೆ ಬೆಳೆ ಬೆಳೆಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು’

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರಾಜ್ಯ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ ಎಂದು ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

’ಬೆಳೆಗೆ ಬೆಂಬಲ ಬೆಲೆಯನ್ನು ಕಾನೂನಿನ ಮೂಲಕ ಖಾತ್ರಿಗೊಳಿಸಬೇಕು. ಅವತ್ತಿನ ಕಾಲಕ್ಕೆ ಬೆಳೆ ಬೆಳೆಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು. ಆಗ ಕಾಫಿ ಬೋರ್ಡ್, ಟೀ ಬೋರ್ಡ್ ಗಳು ಸಮೃದ್ಧವಾಗಿ, ಸಮರ್ಥವಾಗಿದ್ದವು. ಆದರೆ ಈಗ ಕೃಷಿಯಲ್ಲಿ ಸರ್ಕಾರದ ಮಧ್ಯ ಪ್ರವೇಶವಿಲ್ಲದೆ ಈ ಎಲ್ಲ ನಿಗಮಗಳು ದುರ್ಬಲವಾಗಿವೆ. ರೈತರ ವಿಚಾರದಲ್ಲಿ ತನ್ನ ಜವಾಬ್ದಾರಿಗಳಿಂದ ಜಾರಿಕೊಳ್ಳುವ ಸಲುವಾಗಿ ಸರ್ಕಾರ ಈ ಕಾಯ್ದೆಗಳನ್ನು ತರಲು ಹೊರಟಿದೆ’ ಎಂದರು.

ಪೃಥ್ವಿ ಪ್ರತಿಷ್ಠಾನ, ಮಳೆ ಆಶ್ರಿತ ಕೃಷಿ ಪುನರುಜ್ಜೀವನ ಜಾಲ ಹಾಗೂ ಪರ್ಯಾಯ ಕಾನೂನು ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಕಾರ್ಯಗಾರದಲ್ಲಿ ಮಾತನಾಡಿದ ಅವರು, “ರೈತರ ಹಿತ ರಕ್ಷಣೆಗೆ ಸರ್ಕಾರದ ಮಧ್ಯ ಪ್ರವೇಶ ಅತ್ಯಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ” ಎಂದರು.

ಇನ್ನು ತೋಟಗಾರಿಕಾ ಬೆಳೆಗಳು ಸೇರಿದಂತೆ ಇತರ ಪ್ರಮುಖ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದ ಅವರು, ಕನಿಷ್ಟ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಿ ಲಾಭದಾಯಕ ಧಾರಣೆ ಖಾತರಿಗೊಳಿಸುವುದು ಕೂಡ ಅಗತ್ಯ ಎಂದು ಅಭಿಪ್ರಾಯಪಟ್ಟರು.

ವಕೀಲರಾದ ವಿನಯ್ ಶ್ರೀನಿವಾಸ್, ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ಗ್ರೇಸಿ ಸಿ.ಪಿ ಹಾಗೂ ರೈತ ಮುಖಂಡರಾದ ಕುರಬೂರು ಶಾಂತಕುಮಾರ್ ಮುಂತಾದವರು ಕಳೆದ ದಶಕಗಳಲ್ಲಿ ಕೃಷಿ ಕ್ಷೇತ್ರದಲ್ಲಾದ ಏರಿಳಿತಗಳು ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದರು.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

 

ಬೆಂಬಲ ಬೆಲೆಯನ್ನು ಕಾನೂನಿನ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯತೆ ಏರ್ಪಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು.


ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...