Homeಕರ್ನಾಟಕತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು: ಡಾ. ಪ್ರಕಾಶ್ ಕಮ್ಮರಡಿ

ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು: ಡಾ. ಪ್ರಕಾಶ್ ಕಮ್ಮರಡಿ

’ಅವತ್ತಿನ ಕಾಲಕ್ಕೆ ಬೆಳೆ ಬೆಳೆಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು’

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರಾಜ್ಯ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ ಎಂದು ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

’ಬೆಳೆಗೆ ಬೆಂಬಲ ಬೆಲೆಯನ್ನು ಕಾನೂನಿನ ಮೂಲಕ ಖಾತ್ರಿಗೊಳಿಸಬೇಕು. ಅವತ್ತಿನ ಕಾಲಕ್ಕೆ ಬೆಳೆ ಬೆಳೆಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು. ಆಗ ಕಾಫಿ ಬೋರ್ಡ್, ಟೀ ಬೋರ್ಡ್ ಗಳು ಸಮೃದ್ಧವಾಗಿ, ಸಮರ್ಥವಾಗಿದ್ದವು. ಆದರೆ ಈಗ ಕೃಷಿಯಲ್ಲಿ ಸರ್ಕಾರದ ಮಧ್ಯ ಪ್ರವೇಶವಿಲ್ಲದೆ ಈ ಎಲ್ಲ ನಿಗಮಗಳು ದುರ್ಬಲವಾಗಿವೆ. ರೈತರ ವಿಚಾರದಲ್ಲಿ ತನ್ನ ಜವಾಬ್ದಾರಿಗಳಿಂದ ಜಾರಿಕೊಳ್ಳುವ ಸಲುವಾಗಿ ಸರ್ಕಾರ ಈ ಕಾಯ್ದೆಗಳನ್ನು ತರಲು ಹೊರಟಿದೆ’ ಎಂದರು.

ಪೃಥ್ವಿ ಪ್ರತಿಷ್ಠಾನ, ಮಳೆ ಆಶ್ರಿತ ಕೃಷಿ ಪುನರುಜ್ಜೀವನ ಜಾಲ ಹಾಗೂ ಪರ್ಯಾಯ ಕಾನೂನು ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಕಾರ್ಯಗಾರದಲ್ಲಿ ಮಾತನಾಡಿದ ಅವರು, “ರೈತರ ಹಿತ ರಕ್ಷಣೆಗೆ ಸರ್ಕಾರದ ಮಧ್ಯ ಪ್ರವೇಶ ಅತ್ಯಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ” ಎಂದರು.

ಇನ್ನು ತೋಟಗಾರಿಕಾ ಬೆಳೆಗಳು ಸೇರಿದಂತೆ ಇತರ ಪ್ರಮುಖ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದ ಅವರು, ಕನಿಷ್ಟ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಿ ಲಾಭದಾಯಕ ಧಾರಣೆ ಖಾತರಿಗೊಳಿಸುವುದು ಕೂಡ ಅಗತ್ಯ ಎಂದು ಅಭಿಪ್ರಾಯಪಟ್ಟರು.

ವಕೀಲರಾದ ವಿನಯ್ ಶ್ರೀನಿವಾಸ್, ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ಗ್ರೇಸಿ ಸಿ.ಪಿ ಹಾಗೂ ರೈತ ಮುಖಂಡರಾದ ಕುರಬೂರು ಶಾಂತಕುಮಾರ್ ಮುಂತಾದವರು ಕಳೆದ ದಶಕಗಳಲ್ಲಿ ಕೃಷಿ ಕ್ಷೇತ್ರದಲ್ಲಾದ ಏರಿಳಿತಗಳು ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದರು.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

 

ಬೆಂಬಲ ಬೆಲೆಯನ್ನು ಕಾನೂನಿನ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯತೆ ಏರ್ಪಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು.


ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...