Homeಕರ್ನಾಟಕ’ತಾನೂ ಕೃಷಿಕ’ ಎಂದು ಫೋಟೊ ಫೋಸು ನೀಡಿ ಹಾಸ್ಯಕ್ಕೊಳಗಾದ ಕೃಷಿ ಸಚಿವ ಬಿ.ಸಿ. ಪಾಟಿಲ್!

’ತಾನೂ ಕೃಷಿಕ’ ಎಂದು ಫೋಟೊ ಫೋಸು ನೀಡಿ ಹಾಸ್ಯಕ್ಕೊಳಗಾದ ಕೃಷಿ ಸಚಿವ ಬಿ.ಸಿ. ಪಾಟಿಲ್!

- Advertisement -
- Advertisement -

ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟಿಲ್‌ ಮತ್ತು ತೋಟಗಾರಿಕೆ ಸಚಿವ ನಾರಾಯಣಗೌಡ ಇಬ್ಬರೂ ಜೊತೆ ಸೇರಿ ರೈತರಂತೆ ಜಮೀನಿಗಿಳಿದು ಕೃಷಿ ಕೆಲಸದಲ್ಲಿ ಭಾಗಿಯಾಗಿ, ಇಬ್ಬರೂ ಜಮೀನಲ್ಲಿ ಟ್ರ್ಯಾಕ್ಟ ರ್ ಚಾಲನೆ ಮಾಡಿದ್ದರು. ಇದೆಲ್ಲವನ್ನೂ ಮೀರಿಸುವಂತೆ ಸಚಿವ ಬಿ.ಸಿ. ಪಾಟೀಲ್ ‘ತಾನೂ ಕೃಷಿಕ’ ಎಂದು ತೋರಿಸಿಕೊಳ್ಳಲು‌ ತೆನೆಯೊಡೆದು ವಡೆಯಾಗಿದ್ದ ಭತ್ತದ ಗದ್ದೆಗೆ ಗೊಬ್ಬರ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟಿಲ್ “ರೈತರೊಂದಿಗೊಂದು ದಿನ” ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲೆಯ ಮಡುವಿನ ಕೋಡಿ ಹಳ್ಳಿಯಲ್ಲಿ ಒಂದು ದಿನ ಕಳೆದಿದ್ದರು. ಈ ವೇಳೆ ಅಲ್ಲಿ ರೈತರಂತೆ ತಲೆಗೆ ಹಸಿರು ಪೇಟ ಸುತ್ತಿಕೊಂಡು, ರೈತರೊಬ್ಬರ ಗದ್ದೆಗಿಳಿದು ಗೊಬ್ಬರ ಹಾಕಿದ್ದಾರೆ.

ಇದನ್ನೂ ಓದಿ: ’ರೈತರೊಂದಿಗೊಂದು ದಿನ’ ಎನ್ನುತ್ತಿದ್ದಾರೆ ಕೃಷಿ ಸಚಿವ ಬಿ.ಸಿ.ಪಾಟೀಲ್!

ಆದರೆ ಇದೀಗ ಈ ಪೋಟೋ ವೈರಲಾಗಿದ್ದು, ನೆಟ್ಟಿಗರು ಫೋಟೋದಲ್ಲಿರುವ ಭತ್ತದ ಗದ್ದೆಯಲ್ಲಿನ ಭತ್ತವು ಕಟಾವಿಗೆ ಬಂದ ಭತ್ತವಾಗಿದೆ ಎಂದು ಗಮನಸೆಳೆದಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ವ್ಯಾಪಕ ಟ್ರೋಲ್‌ಗೆ ಒಳಗಾಗಿದ್ದಾರೆ.

ಭತ್ತದ ಬೆಳೆ ಹೊಡೆ ಕಡೆದು ಭತ್ತ ಕಟ್ಟುವ ಸಮಯದಲ್ಲಿ ಬೆಳೆಗೆ ಯಾವುದೇ ಗೊಬ್ಬರ ಹಾಕುವುದಿಲ್ಲ‌. ಈ ಬಗ್ಗೆ ಜ್ಞಾನವಿರದ ಇಬ್ಬರು ಸಚಿವರು ಮಾತ್ರ ತಾವು ‘ಕೃಷಿಕ’ ಅಥವಾ ರೈತರ ಮಕ್ಕಳು, ತಮಗೂ ಕೃಷಿ ಬಗ್ಗೆ ಜ್ಞಾನವಿದೆ. ನಾವು ಕೃಷಿ ಕೆಲಸ ಮಾಡುತ್ತೇವೆ ಎಂಬುದನ್ನು ನಿರೂಪಿಸಿಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ‌.

ಇವರ ಮೂರ್ಖತನದ ಫೋಟೋವನ್ನು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಹಾಕಿ ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ಹೊಡೆ ಕಡೆಯುತ್ತಿರುವ ಭತ್ತಕ್ಕೆ ಗೊಬ್ಬರ ಹಾಕ್ತಿರೋ ಇಬ್ಬರು ಸಚಿವರಿಗೆ ಉತ್ತಮ ರೈತ ಪ್ರಶಸ್ತಿ ಕೊಡಬೇಕು ಎಂದಿರುವ ನೆಟ್ಟಿಗರು, ಹೊಡೆ ಕಡೆಯುತ್ತಿರುವ ಭತ್ತದ ಗದ್ದೆಗೆ ಗೊಬ್ಬರ ಹಾಕಿ ಫೋಟೋಗೆ ಫೋಸು ನೀಡಿರುವ ಇವರಿಬ್ಬರಿಗೂ ಕೃಷಿ ಬಗ್ಗೆ ಸಾಮಾನ್ಯ ಜ್ಞಾನ ಇಲ್ಲವೆಂಬದನ್ನು ತಾವೇ ನಿರೂಪಿಸಿಕೊಂಡಿದ್ದಾರೆ ಎಂದು ಹಾಸ್ಯ ಮಾಡಿದ್ದಾರೆ.ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಂಡ್ಯದಲ್ಲಿ ಕಾಯ್ರಕ್ರಮ ಮಾಡಿದ್ರೆ ಉತ್ತರ ಕರ್ನಾಟಕ ರೈತರು ಹೇಗ ತಿಳ್ಕೊಬೇಕೋ ??

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...